Advertisement

ಶೀಘ್ರವೇ ಸಂಪುಟ ವಿಸ್ತರಣೆ: ಪರಮೇಶ್ವರ್‌

06:35 AM Nov 15, 2018 | Team Udayavani |

ತುಮಕೂರು: ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ. 

Advertisement

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಸರ್ಕಾರ ಸುಭದ್ರವಾಗಿದೆ. ಉತ್ತಮ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ. ಈಗ ಎಲ್ಲರ ನಿರೀಕ್ಷೆ ಇರುವುದು ಸಚಿವ ಸಂಪುಟ ವಿಸ್ತರಣೆ ಕಡೆ. ಸಚಿವ ಸಂಪುಟ ವಿಸ್ತರಣೆಯನ್ನು ಶೀಘ್ರವಾಗಿ ಮಾಡಲಾಗುವುದು. ಹಾಗೆಯೇ ನಿಗಮ ಮಂಡಳಿಗಳಿಗೂ ಅಧ್ಯಕ್ಷರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇನ್ನು ಆರು ತಿಂಗಳಲ್ಲಿ ಬರುವ ಲೋಕಸಭಾ ಚುನಾಣೆಯಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಬಿಜೆಪಿ ವಿರುದ್ಧ ಹೋರಾಟ ಮಾಡಲಾಗುವುದು ಎಂದರು

Advertisement

Udayavani is now on Telegram. Click here to join our channel and stay updated with the latest news.

Next