Advertisement
ಇಂದು ( ಬುಧವಾರ, ಜುಲೈ 7) ಸಂಜೆ 6 ಗಂಟೆಗೆ ಕೇಂದ್ರ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ರಾಷ್ಟ್ರಪತಿ ಭವನದಲ್ಲಿನಡೆಯಲಿದ್ದು, ಈಗಾಗಲೇ ಸಂಭಾವ್ಯ ಸಚಿವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Related Articles
Advertisement
ರಾಜ್ಯ ಸಚಿವರಾದ ಜಿ ಕಿಶನ್ ರೆಡ್ಡಿ, ಪುರುಷೋತ್ತಮ್ ರೂಪಾಲ ಮತ್ತು ಅನುರಾಗ್ ಠಾಕೂರ್ ಮತ್ತಿತರರು ಪ್ರಧಾನಿಯನ್ನು ಭೇಟಿ ಮಾಡಿದ್ದು, ಅವರಿಗೂ ಸಂಪುಟ ದರ್ಜೆಗೆ ಬಡ್ತಿ ಸಿಗುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ಮಾಹಿತಿ ನೀಡಿವೆ.
ಇನ್ನು, ಕೇಂದ್ರ ಸಚಿವರಾದ ಆರ್ ಕೆ ಸಿಂಗ್, ಮನ್ಸುಖ್ ಮಾಂಡವಿಯಾ ಮತ್ತು ಹರ್ದೀಪ್ ಸಿಂಗ್ ಪುರಿ ಅವರು ಸಹ ಬಡ್ತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯುವಕರು ಮತ್ತು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಆಡಳಿತಾತ್ಮಕ ಅನುಭವ ಹೊಂದಿರುವವರು, ಬಡ್ತಿ ಪಡೆಯುವವರು ಒಳಗೊಂಡು ಸುಮಾರು 43 ಮಂದಿಗೆ ಸಚಿವ ಸ್ಥಾನದ ಭಾಗ್ಯ ಇಂದು ಮೋದಿ ಸರ್ಕಾರದ ನೂತನ ಸಂಪುಟದಲ್ಲಿ ಸಿಗಲಿದೆ ಎಂದು ಹೇಳಲಾಗಿದೆ.
ಸಂಭಾವ್ಯ ಸಚಿವರು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಸಂದರ್ಭ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕೂಡ ಜೊತೆಯಲ್ಲಿದ್ದರು ಎಂದು ವರದಿಯಾಗಿದೆ.
ಇದನ್ನು ಓದಿ : ಶಾಪ್ಸಿ ಮೂಲಕ ಬೇರೆಯವರಿಗೆ ವಸ್ತುಗಳನ್ನು ಬುಕ್ ಮಾಡಿಕೊಡಿ, ನೀವು ಕಮಿಷನ್ ಪಡೆಯಿರಿ!