Advertisement

ನನೆಗುದಿಗೆ ಬಿದ್ದ ರೈಲ್ವೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹ

04:41 PM Jun 29, 2019 | Suhan S |

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ಪ್ರಮುಖ ರೈಲ್ವೆ ಯೋಜನೆಗಳನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸುವಂತೆ ಕೇಂದ್ರದ ಉಭಯ ರೈಲ್ವೆ ಸಚಿವರಿಗೆ ಚಿಕ್ಕೋಡಿ ಲೋಕಸಭೆಯ ಸಂಸದ ಅಣ್ಣಾಸಾಹೇಬ ಜೊಲ್ಲೆ ಮನವಿ ಮಾಡಿದರು.

Advertisement

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಪಿಯುಷ್‌ ಗೋಯಲ್ ಹಾಗೂ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸುರೇಶ ಅಂಗಡಿಯವರನ್ನು ಭೇಟಿ ಮಾಡಿದ ಸಂಸದ ಜೊಲ್ಲೆ, ಗಡಿ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿಸಬೇಕು ಎಂದರು.

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ನಿತ್ಯ ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ಸಾವಿರಾರು ಜನ ಕಾರ್ಖಾನೆಗಳಿಗೆ ಉದ್ಯೋಗಕ್ಕಾಗಿ ತೆರಳುತ್ತಾರೆ, ಅಲ್ಲದೇ ರೈತರು, ವ್ಯಾಪಾರಿಗಳು, ಉದ್ದಿಮೆದಾರರ ಸರಕು ಸರಂಜಾಮು ಸಾಗಾಣಿಕೆಗೆ ಹಾಗೂ ಹಲವಾರು ಪಟ್ಟಣಗಳ ರಹವಾಸಿಗಳಿಗೆ ಆರ್ಥಿಕ ಲಾಭದ ಹಿತದೃಷ್ಟಿಯಿಂದ ಹಾಗೂ ಸಮಯದ ಉಳಿತಾಯದೊಂದಿಗೆ ದಿನನಿತ್ಯ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲವಾಗುವುದರೊಂದಿಗೆ ರೈಲ್ವೆ ಇಲಾಖೆಗೆ ಲಾಭವಾಗಲಿದೆ. ಆದ್ದರಿಂದ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನೆನೆಗುದಿಗೆ ಬಿದ್ದಿರುವ ಪ್ರಮುಖ ರೈಲ್ವೆ ಯೋಜನೆಗಳನ್ನು ಆದಷ್ಟು ಶೀಘ್ರ ಅನುಷ್ಠಾನಗೊಳಿಸುವಂತೆ ಮನವಿ ಮಾಡಿ ಪ್ರಸ್ತಾವನೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next