Advertisement

ಶಿವಾಜಿ ಜಯಂತಿ ಆಚರಿಸಲು ಕರೆ

11:44 AM Feb 15, 2019 | |

ಯಾದಗಿರಿ: ಜಿಲ್ಲೆ ಎಲ್ಲೆಡೆ ಶ್ರದ್ಧಾ ಭಕ್ತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಫೆ. 19ರಂದು ಆಚರಿಸಲು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಕರೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ವತಿಯಿಂದ ಜಯಂತಿ ಕಾರ್ಯಕ್ರಮವನ್ನು ಅಂದು ಬೆಳಗ್ಗೆ 11:00 ಗಂಟೆಗೆ ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 

ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ಛತ್ರಪತಿ ಶಿವಾಜಿ ಮಹಾರಾಜರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ತಾಲೂಕು ಮಟ್ಟದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿಸಲು ತಿಳಿಸಿದರು.
 
ಜಯಂತ್ಯುತ್ಸವ ನಿಮಿತ್ತ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬೆಳಗ್ಗೆ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಜಿಲ್ಲಾಡಳಿತ ಕಾರ್ಯಕ್ರಮದ ಪೂರ್ವದಲ್ಲಿ ಬೆಳಗ್ಗೆ 9:00 ರಿಂದ 11:00 ಗಂಟೆಯವರೆಗೆ ನಗರದ ಪದವಿ ಮಹಾವಿದ್ಯಾಲಯದಿಂದ ಸುಭಾಷ ವೃತ್ತ, ಶಾಸ್ತ್ರೀ ವೃತ್ತದ ಮಾರ್ಗವಾಗಿ ವಿದ್ಯಾಮಂಗಲ ಕಾರ್ಯಾಲಯದವರೆಗೆ ನಡೆಸುವ ಶ್ರೀ ಛತ್ರಪತಿ ಶಿವಾಜಿ ಮಹಾರಾಜರವರ ಭಾವಚಿತ್ರದ ಮೆರವಣಿಗೆಗಾಗಿ ಸಮಾಜದ ಸಂಘಟನೆಗೆ ಒಂದು ದಿನ ಮುಂಚಿತವಾಗಿ ಟ್ರಾÂಕ್ಟರ್‌ ನೀಡಬೇಕು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಅಥವಾ ಇನ್ನಿತರೆ ಒಂದು ನುರಿತ ಕಲಾವಿದರ ತಂಡವನ್ನು ಏರ್ಪಾಡು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ನಿರ್ದೇಶಿಸಿದರು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಸಭಿಕರಿಗೆ ಅಲ್ಪ ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದು. ಜಯಂತಿ ಮತ್ತು ಮೆರವಣಿಗೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಪೊಲೀಸ್‌ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್‌ ಅಧಿ ಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರನ್ನು ನೇಮಕ ಮಾಡಲಾಯಿತು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಘುವೀರಸಿಂಗ್‌ ಠಾಕೂರ್‌ ಸಭೆಯ ನಡಾವಳಿ ಓದಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ಗೌರಮ್ಮ, ವಿಕ್ರಂಸಿಂಗ್‌, ಮರಾಠ ಸಮಾಜದ ಜಿಲ್ಲಾಧ್ಯಕ್ಷ ಗಣೇಶ, ನಾರಾಯಣರಾವ್‌ ಚವ್ಹಾಣ, ಖಂಡೋಬ ಸಗರ, ಸಂಜಯ್‌ ಬಗಾಡೆ, ವಿಜಯ್‌ ಚವ್ಹಾಣ, ವೆಂಕಟೇಶ ಭೀಮನಹಳ್ಳಿ, ಛತ್ರಪತಿ ಶಿವಾಜಿ ಯುವ ಸೇನೆಯ ಜಿಲ್ಲಾಧ್ಯಕ್ಷ ಪರಶುರಾಮ ಶೇಗುರಕರ್‌, ಸಮಾಜದ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next