Advertisement

ಜೀವ ಬೆದರಿಕೆ ಕರೆ: ರಕ್ಷಣೆ ನೀಡಲು ಈಶ್ವರಪ್ಪ ಒತ್ತಾಯ

12:17 AM Apr 08, 2019 | Team Udayavani |

ಶಿವಮೊಗ್ಗ: ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಹಿರಿಯ ಮುಖಂಡ, ಶಾಸಕ ಕೆ.ಎಸ್‌.ಈಶ್ವರಪ್ಪ ಅವರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

Advertisement

ಬಿಜೆಪಿಯಿಂದ ಮುಸಲ್ಮಾನರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ನೀಡುವುದಿಲ್ಲ ಎಂದು ಈಶ್ವರಪ್ಪ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಈಶ್ವರಪ್ಪಗೆ ಕರೆ ಮಾಡಿ ಉರ್ದು ಮಿಶ್ರಿತ ಭಾಷೆಯಲ್ಲಿ ಜೀವ ಬೆದರಿಕೆ ಒಡ್ಡಿದ್ದ.
ಹೀಗಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈಶ್ವರಪ್ಪ ಅವರು ಶಿವಮೊಗ್ಗ ಎಸ್‌ಪಿ ಡಾ| ಎಂ.ಅಶ್ವಿ‌ನಿ ಅವರಿಗೆ ದೂರು ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಪ್ರಚಾರ ಮುಗಿಸಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಕರೆ ಮಾಡಿದ ವ್ಯಕ್ತಿ, ತಮಗೆ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ಭದ್ರತೆ ಒದಗಿಸಬೇಕು ಹಾಗೂ ಬೆದರಿಕೆ ಒಡ್ಡಿದ ವ್ಯಕ್ತಿಯ ವಿರುದಟಛಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಈಶ್ವರಪ್ಪ ಅವರು ಎಸ್‌ಪಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next