Advertisement

ಕಾರ್ಮಿಕರ ಕಲ್ಯಾಣ ಯೋಜನೆಗಳ ಐಕೋನಿಕ್‌ ವೀಕ್‌ ಪ್ರಚಾರಕ್ಕೆ ಚಾಲನೆ

12:16 PM Mar 15, 2022 | Team Udayavani |

ಕಲಬುರಗಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳ ಕುರಿತು ಕಾರ್ಮಿಕ ವರ್ಗದಲ್ಲಿ ಜನಜಾಗೃತಿ ಮೂಡಿಸುವ ಐಕೋನಿಕ್‌ ವೀಕ್‌ ಪ್ರಚಾರ ಅಭಿಯಾನಕ್ಕೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್‌ ಸೋಮವಾರ ಚಾಲನೆ ನೀಡಿದರು.

Advertisement

ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ, ಕಾರ್ಮಿಕ ವರ್ಗ ಹೆಚ್ಚಾಗಿರುವ ಕಾರ್ಖಾನೆಗೆ ಹೋಗಿ ಕ್ಯಾಂಪ್‌ ಆಯೋಜಿಸುವ ಮೂಲಕ ಹೆಚ್ಚಿನ ಜನಜಾಗೃತಿ ಮೂಡಿಸಬೇಕೆಂದರು. ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ್‌ ಮಾತನಾಡಿ, ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೀಡಲಾಗುವ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ವೈದ್ಯಕೀಯ ಸಹಾಯಧನ, ವಸತಿ ಸೌಲಭ್ಯ, ಮದುವೆ ಸಹಾಯಧನ, ಹೆರಿಗೆ ಸೌಲಭ್ಯ, ತಾಯಿ ಮಗು ಸಹಾಯಹಸ್ತ, ಶೈಕ್ಷಣಿಕ ಸಹಾಯಧನ, ಶಿಶುಪಾಲನಾ ಭತ್ಯೆ, ಕಾರ್ಮಿಕ ಸಂಜೀವಿನಿ ಹಾಗೂ ಶಿಕ್ಷಣ ತರಬೇತಿ ಕುರಿತು ಈ ವಾಹನ ಇಂದಿನಿಂದ ಒಂದು ವಾರಗಳ ಕಾಲ ಜಿಲ್ಲಾದ್ಯಂತ ಸಂಚರಿಸಿ ಅರಿವು ಮೂಡಿಸಲಿದೆ ಎಂದರು.

ಡಿ.ಜಿ. ನಾಗೇಶ, ಅವಿನಾಶ ನಾಯಕ್‌, ಸಂತೋಷ ಕುಲಕರ್ಣಿ ಇದ್ದರು. ಇದೇ ಸಂದರ್ಭದಲ್ಲಿ ಪ್ರಚಾರ ಸಾಮಗ್ರಿಗಳಾದ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next