Advertisement

ಸಿಇಟಿ ಬರೆಯುವರ ಸಂಖ್ಯೆ ಇಳಿಮುಖ?

11:14 PM Apr 20, 2019 | Lakshmi GovindaRaju |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆಯಿದೆ.

Advertisement

2019-20ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಗೆ ಏ.29, 30ರಂದು ಹಾಗೂ ಮೇ 1ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಸುಮಾರು 1.90 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಪದವಿ ಪೂರ್ವ ಶಿಕ್ಷಣ ಇಲಾಖೆ ಸಂಪ್ರದಾಯ ಮುರಿದು ಸಿಇಟಿಗೂ ಮೊದಲೇ ಫ‌ಲಿತಾಂಶ ನೀಡಿದ್ದರಿಂದ ವಿಜ್ಞಾನ ವಿಭಾಗದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಸಿಇಟಿ ಬರೆಯಲು ಹಿಂದೇಟು ಹಾಕುತ್ತಿದ್ದಾರೆಂದು ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಪ್ರಾಧಿಕಾರದಿಂದ ಸಿಇಟಿಗೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಂಡಾಗಿದೆ. ಅಲ್ಲದೆ, ಪರೀಕ್ಷಾ ಕೇಂದ್ರಕ್ಕೆ ಬೇಕಾದ ಸೌಕರ್ಯವನ್ನು ಒದಗಿಸಿಯಾಗಿದೆ. ವಿದ್ಯಾರ್ಥಿಗಳು ಕೂಡ ತಯಾರಿ ಮಾಡಿಕೊಂಡಿದ್ದರು.

ಈ ಮಧ್ಯೆ ಪಿಯುಸಿ ಫ‌ಲಿತಾಂಶ ಹೊರಬಿದ್ದಿರುವುದರಿಂದ ಅನುತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ ಇರುಸು ಮುರುಸು ಅರಂಭವಾಗಿದೆ. ಪಿಯುಸಿಯಲ್ಲೇ ಅನುತ್ತೀರ್ಣರಾಗಿದ್ದರಿಂದ ಸಿಇಟಿ ಏಕೆ ಬರೆಯಬೇಕು ಎಂಬ ಮಾನಸಿಕತೆ ವಿದ್ಯಾರ್ಥಿಗಳಲ್ಲಿ ಬಂದು ಬಿಟ್ಟಿದೆ ಎಂದು ಹೇಳಲಾಗುತ್ತಿದೆ.

Advertisement

ಐಸಿಎಸ್‌ಸಿ, ಸಿಬಿಎಸ್‌ಇ ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ಹಾಗೂ ತೆಲಂಗಾಣ ಮೊದಲಾದ ರಾಜ್ಯಗಳ 12ನೇ ತರಗತಿ ಪರೀಕ್ಷೆಯ ಫ‌ಲಿತಾಂಶ ಕೂಡ ಇನ್ನು ಬಂದಿಲ್ಲ.

ಹೀಗಾಗಿ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಸಾಧ್ಯತೆ ಇದೆ. ಅಲ್ಲದೇ ಹಂಚಿಕೆಯಾಗದೇ ಬಾಕಿ ಉಳಿಯುವ ಎಂಜಿನಿಯರಿಂಗ್‌ ಸೀಟುಗಳ ಪ್ರಮಾಣವೂ ಹೆಚ್ಚಾಗುವ ಆತಂಕ ಇದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ವಿವರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next