Advertisement

ಯುದ್ಧ ನಿಲ್ಲಿಸಿ ಎಂದು ರಷ್ಯಾ ಅಧ್ಯಕ್ಷರಿಗೆ ನಿರ್ದೇಶನ ಕೊಡಬೇಕೆ? : ಸುಪ್ರೀಂಕೋರ್ಟ್‌

09:46 PM Mar 03, 2022 | Team Udayavani |

ನವದೆಹಲಿ: “ಯುದ್ಧವನ್ನು ನಿಲ್ಲಿಸಿ ಎಂದು ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಗೆ ನಾವು ಹೇಳಬೇಕೇ’? ಹೀಗೆಂದು ಕೇಳಿದ್ದು ಸುಪ್ರೀಂಕೋರ್ಟ್‌.

Advertisement

ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಬೆಂಗಳೂರಿನ ಇಂದಿರಾನಗರದ ಅಹನಾ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ನೇತೃತ್ವದ ನ್ಯಾಯಪೀಠ ಈ ಪ್ರಶ್ನೆ ಮಾಡಿದೆ. “ಇಂಥ ವಿಚಾರದಲ್ಲಿ ಕೋರ್ಟ್‌ ಏನು ಮಾಡಲು ಸಾಧ್ಯ?  ಕೂಡಲೇ ಯುದ್ಧವನ್ನು ನಿಲ್ಲಿಸಿ ಎಂದು ರಷ್ಯಾ ಅಧ್ಯಕ್ಷ ಪುಟನ್‌ ಅವರಿಗೆ ನಿರ್ದೇಶನ ನೀಡಲು ಸಾಧ್ಯವೇ?’ ಎಂದು ಕೇಳಿತು.

ಅರ್ಜಿದಾರರ ಪರ ವಕೀಲ ಅಭಯ ಆನಂದ್‌ ಜೇನಾ, ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಿಂದ ರೊಮೇನಿಯಾಕ್ಕೆ ಬರದಂತೆ ತಡೆಯಲಾಗುತ್ತಿದೆ ಎಂದರು. ಕೊನೆಗೆ ನ್ಯಾಯಪೀಠ, ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಸಹಾಯ ಮಾಡುವಂತೆ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ರಿಗೆ ಸೂಚಿಸಿತು. ಅರ್ಜಿದಾರ ಅಹನಾ ಉಕ್ರೇನ್‌ನ ಒಡೆಸ್ಸಾದಲ್ಲಿ ಎಂಬಿಬಿಎಸ್‌ ಮಾಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next