Advertisement
ಉಡುಪಿ ಮತ್ತು ದಕ್ಷಿಣ ಜಿಲ್ಲೆಗಳ ಒಟ್ಟು 40 ವರ್ತಕರ ಸಂಘಟನೆಗಳನ್ನೊಳಗೊಂಡ ಕೆನರಾ ಉದ್ಯಮಿಗಳ ಒಕ್ಕೂಟದ ಪದಾಧಿಕಾರಿಗಳು ಗುರುವಾರ ನಗರದಲ್ಲಿ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.
Related Articles
Advertisement
ಜಿಲ್ಲಾ ಬೇಕರಿ ಅಸೋಸಿಯೇಶನ್ ಅಧ್ಯಕ್ಷ ವಾಲ್ಟರ್ ಸಲ್ದಾನ ಮಾತನಾಡಿ, ವಾರಾಂತ್ಯ ಕರ್ಫ್ಯೂನಲ್ಲಿ ಬೇಕರಿ ಅವರಿಗೆ ವ್ಯಾಪಾರ ಮಾಡಲು ಅವಕಾಶ ನೀಡಿದ್ದರೂ ಜನರಿಲ್ಲದೆ ನಾವು ಮಾಡಿದ ಪದಾರ್ಥಗಳನ್ನು ತೋಡಿಗೆ ಎಸೆಯುವ ಸ್ಥಿತಿ ಎದುರಾಗಿದೆ ಎಂದರು.
ಸಾಮಾಜಿಕ ಹೋರಾಟಗಾರ ಪ್ರವೀಣ್ ವಾಲ್ಕೆ, ಉಡುಪಿ ಜಿಲ್ಲಾ ಟೈಲರ್ ಅಸೋಸಿಯೇಶನ್ ಅಧ್ಯಕ್ಷ ಗುರುರಾಜ್ ಶೆಟ್ಟಿ, ಜಿಲ್ಲಾ ವರ್ತಕರ ಹಿತರಕ್ಷಣಾ ವೇದಿಕೆಯ ಮ್ಯಾಕ್ಸಿಮ್ ಸಲ್ದಾನ ಉಪಸ್ಥಿತರಿದ್ದರು.
ಬದಲುಕಲು ಬಿಡಿ :
ಜಿಲ್ಲಾ ವರ್ತಕರ ಹಿತರಕ್ಷಣೆ ವೇದಿಕೆಯ ಅಧ್ಯಕ್ಷ ದಿವಾಕರ್ ಸನಿಲ್, ಅಂಗಡಿ ಮಾಲಕರಿಗೆ ಬದಲುಕಲು ಬಿಡಿ ಎಂದು ಹೋರಾಟ ಆರಂಭಿಸಿದ್ದೇವೆ. ವಾರಾಂತ್ಯ ಕರ್ಫ್ಯೂ ಹಿಂದಕ್ಕೆ ಪಡೆಯದಿದ್ದರೆ ಜಿಲ್ಲೆಯ ಎಲ್ಲ ವರ್ತಕರು ವಾರಾಂತ್ಯದಲ್ಲಿ ಮಳಿಗೆ ತೆರೆಯಲಿದ್ದಾರೆ ಎಂದು ಹೇಳಿದರು.
ಒಕ್ಕೂಟದ ಗೌರವಾಧ್ಯಕ್ಷ ಎಂ.ಜಿ. ಹೆಗಡೆ ಮಾತನಾಡಿ, ರಾಜ್ಯ ಸರಕಾರ ವಾರಾಂತ್ಯ ಕರ್ಫ್ಯೂ ಹೇರುವುದು ಅವೈಜ್ಞಾನಿಕ ಹಾಗೂ ಅನೈತಿಕ. ರಾಜಕೀಯ ನಾಯಕರ ಹಾಗೂ ಧಾರ್ಮಿಕ ಸಂಸ್ಥೆಗಳ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ಹಾಕುವುದಿಲ್ಲ. ಆದರೆ ವರ್ತಕರಿಗೆ ಮಾತ್ರ ವ್ಯಾಪಾರ ನಡೆಸಲು ಅವಕಾಶ ನೀಡುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದೇವೆ ಎಂದರು.
ಸರಕಾರವೇ ಹೊಣೆ :
ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂನಿಂದ ನಾವೆಲ್ಲ ಕೆಲಸ ಕಳೆದುಕೊಂಡಿದ್ದೇವೆ. ರಾತ್ರಿ ಮತ್ತು ವಾರಾಂತ್ಯದಲ್ಲಿ ನಮ್ಮ ಕೆಲಸ ಇರುವುದು. ಈಗ ಕಾರ್ಯಕ್ರಮಗಳಿಲ್ಲದೆ ನಾವು ಸಂಪೂರ್ಣ ಸೋತು ಹೋಗಿದ್ದೇವೆ. ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಆರ್ಥಿಕ ಸಮಸ್ಯೆಯಿಂದ ಜೀವ ಕಳೆದುಕೊಂಡರೆ ಸರಕಾರವೇ ಇದಕ್ಕೆ ಹೊಣೆ ಆಗಲಿದೆ ಎಂದು ಜಿಲ್ಲಾ ಧ್ವನಿ-ಬೆಳಕು ಸಂಯೋಜಕರ ಸಂಘಟನೆ ಅಧ್ಯಕ್ಷ ರಾಮಕೃಷ್ಣ ಕುಂದರ್ ಹೇಳಿದರು.