Advertisement

7ನೇ ತರಗತಿ ಪರೀಕ್ಷೆ ರದ್ದು ಮಾಡಿ

09:05 PM Mar 22, 2020 | Lakshmi GovindaRaj |

ಬೆಂಗಳೂರು: ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಮುಂದೂಡಿರುವ ಸರ್ಕಾರ, ಲಕ್ಷಾಂತರ ಮಕ್ಕಳು, ಶಿಕ್ಷಕರ ಹಿತದೃಷ್ಟಿಯಿಂದ 7ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಬೇಕು. ಹಾಗೆಯೇ, ಜನಗಣತಿ ಕಾರ್ಯಗಳನ್ನು ಕೂಡ ಮುಂದೂಡಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

Advertisement

ಜನಗಣತಿ ಕಾರ್ಯಕ್ಕೆ ಶಿಕ್ಷಕರನ್ನೇ ಬಳಸಿಕೊಳ್ಳುವುದರಿಂದ ಸದ್ಯದ ಮಟ್ಟಿಗೆ ಈ ಕಾರ್ಯಗಳನ್ನು ಮುಂದೂಡಬೇಕು. ರಾಜ್ಯದ ಎಲ್ಲಾ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗೆ ಮನೆಯಿಂದಲೇ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ, ಅನ್ಯ ಕಾರ್ಯ ನಿಮಿತ್ತ ರಜೆ ಎಂದು ಪರಿಗಣಿಸಲು ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next