Advertisement

ಮೋದಿ ನಾಮಪತ್ರ ರದ್ದು ಮಾಡಿ

02:50 AM May 01, 2019 | Team Udayavani |

“40 ಟಿಎಂಸಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ’ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆ ಕುರಿತು ಪಶ್ಚಿಮ ಬಂಗಾಲದ ತೃಣಮೂಲ ಕಾಂಗ್ರೆಸ್‌ ಪಕ್ಷವು ಮಂಗಳವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Advertisement

ಈ ಕುರಿತು ಪತ್ರ ಬರೆದಿರುವ ಟಿಎಂಸಿ, “ಮೋದಿ ಹೇಳಿಕೆಯು ಅವರು ಕುದುರೆ ವ್ಯಾಪಾರದಲ್ಲಿ ತೊಡಗಿರುವುದನ್ನು ಸೂಚಿಸಿದೆ. ಇಂಥ ಪ್ರಚೋದನಕಾರಿ ಮತ್ತು ಪ್ರಜಾಸತ್ತಾತ್ಮಕವಲ್ಲದ ಹೇಳಿಕೆ ನೀಡಿರುವ ಕಾರಣ ಮೋದಿಯವರ ನಾಮಪತ್ರವನ್ನೇ ರದ್ದು ಮಾಡಬೇಕು’ ಎಂದು ಮನವಿ ಮಾಡಿದೆ. ಮೋದಿ ಅವರು ನಾಚಿಕೆಬಿಟ್ಟು ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಅವರ ನಾಮಪತ್ರವನ್ನು ಅಸಿಂಧುಗೊಳಿಸಬೇಕು ಎಂದು ಟಿಎಂಸಿ ನಾಯಕಿ ಮಮತಾ ಆಗ್ರಹಿಸಿದ್ದಾರೆ.

ನಿಷೇಧ ಹೇರಿ: ಇದೇ ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌, “ಪ್ರಧಾನಿ ಮೋದಿ ಅವರಿಗೆ 72 ಗಂಟೆಗಳ ಕಾಲ ಪ್ರಚಾರಕ್ಕೆ ನಿಷೇಧ ಹೇರಬೇಕು’ ಎಂದು ಆಯೋಗವನ್ನು ಒತ್ತಾಯಿಸಿದ್ದಾರೆ.

ಆಯೋಗದ ಪ್ರತಿಕ್ರಿಯೆ ಕೇಳಿದ ಸುಪ್ರೀಂ: ಪ್ರಚಾರದ ವೇಳೆ ಸಶಸ್ತ್ರ ಪಡೆಗಳ ಹೆಸರು ಬಳಕೆ ಮಾಡುವ ಮೂಲಕ ಪ್ರಧಾನಿ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ನೀತಿ ಸಂಹಿತೆ ಉಲ್ಲಂ ಸಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ, ಈ ಕುರಿತು ಆಯೋಗದ ಪ್ರತಿಕ್ರಿಯೆ ಕೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next