Advertisement

ರೋಹಿತ್‌ ಚಕ್ರತೀರ್ಥ ನೇತೃತ್ವದ ಸಮಿತಿ ರದ್ದು ಮಾಡಿ: ಡಿ.ಕೆ. ಶಿವಕುಮಾರ್‌

10:02 PM May 30, 2022 | Team Udayavani |

ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿರುವ ಹಾಗೂ ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಪಮಾನ ಮಾಡಿರುವ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವ ನಾಗೇಶ್‌ ಹಾಗೂ ಬಿಜೆಪಿ ಸರಕಾರ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ನಿರ್ಮಾಣ ಮಾಡುತ್ತಿದ್ದು, ಇತಿಹಾಸವನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ. ಯಾವುದೇ ಸಮಿತಿಯ ಅಧ್ಯಕ್ಷರಾದವರೂ ತಮ್ಮದೇ ಆದ ವರ್ಚಸ್ಸು ಇಟ್ಟುಕೊಂಡಿರಬೇಕು.

ಆದರೆ ರೋಹಿತ್‌ ಚಕ್ರತೀರ್ಥರಿಗೆ ಕನ್ನಡ ಭಾಷೆ, ಬಾವುಟದ ಬಗ್ಗೆಯೇ ಗೌರವವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next