Advertisement

Ration card: ಪಡಿತರ ಚೀಟಿ ಅರ್ಜಿ ಸಲ್ಲಿಕೆ ರದ್ದು

11:07 PM Aug 18, 2023 | Team Udayavani |

ಬೆಂಗಳೂರು: ಹೊಸದಾಗಿ ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿ ಪಡೆಯಲು ಸಾರ್ವಜನಿಕರು ಅರ್ಜಿ ಸಲ್ಲಿಸುವುದಕ್ಕೆ ಇದ್ದ ಅವಕಾಶವನ್ನು ತಾತ್ಕಾಲಿಕವಾಗಿ ರದ್ದುಪಡಿಸಲು ಸರಕಾರ ನಿರ್ಧರಿಸಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ಹೇಳಿದ್ದಾರೆ.

Advertisement

ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ಕಾರ್ಡ್‌ ನೀಡಲು ಸೂಚಿಸಲಾಗಿದೆ ಎಂದರು.

ಮುಂದಿನ ತಿಂಗಳಿಂದ ಅಕ್ಕಿ?
ಅನ್ನಭಾಗ್ಯ ಫ‌ಲಾನುಭವಿಗಳಿಗೆ ಈ ತಿಂಗಳೂ ನಗದು ನೀಡಲಾಗುತ್ತದೆ. ಸೆಪ್ಟಂ ಬರ್‌ನಿಂದ 10 ಕೆ.ಜಿ. ಅಕ್ಕಿ ನೀಡಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next