Advertisement
ನಗರದ ತಾಪಂ ಸಭಾಂಗಣದಲ್ಲಿ ಅಖೀಲ ಭಾರತ ವಕೀಲರ ಸಂಘದ ರಾಜ್ಯ ಸಮಿತಿಯ ಸಭೆಯ ಭಾಗವಾಗಿ ಕಾಶ್ಮೀರದ 370ನೇ ವಿಧಿ ರದ್ಧತಿ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿ, ಕೇಂದ್ರದ ಈ ನಿರ್ಧಾರದಿಂದ ಕಾಶ್ಮೀರದ ಅಸ್ಮಿತೆಗೆ ಧಕ್ಕೆ ಬರುತ್ತದೆಯೆಂದರು.
Related Articles
Advertisement
ವಿಶೇಷವಾಗಿ ಭಯೋತ್ಪಾದನಾ ಚಟುವಟಿಕೆ ಇನ್ನಷ್ಟು ಹೆಚ್ಚಾಗುವ ಆತಂಕ ಇದೆ. ಅಲ್ಲಿನ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು ಕೇಂದ್ರ ಸರ್ಕಾರ ರಾಜ್ಯಗಳ ವಿಭಜನೆಯನ್ನು ಧರ್ಮದ ಆಧಾರದಲ್ಲಿ ನಡೆಸುತ್ತಿರುವುದು ಆತಂಕಕಾರಿ ವಿಚಾರ ಎಂದರು. ವಿಚಾರ ಸಂಕಿರಣದಲ್ಲಿ ಅಖೀಲ ಭಾರತ ವಕೀಲರ ಒಕ್ಕೂಟದ ರಾಜ್ಯಾಧ್ಯಕ್ಷ ಶಂಕರಪ್ಪ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ರಾಮಚಂದ್ರರರೆಡ್ಡಿ, ಉಪಾಧ್ಯಕ್ಷ ಎನ್.ರಾಘುರಾಮ್, ಕರ್ನಾಟಕ ವಕೀಲರ ಪರಿಷತ್ತು ಹಾಗೂ ಅಖಿಲ ಭಾರತ ವಕೀಲರ ಸಂಘದ ಉಪಾಧ್ಯಕ್ಷರಾದ ಕೋಟೇಶ್ವರರಾವ್, ವಕೀಲರಾದ ಪಾಪಿರೆಡ್ಡಿ, ಶಿವಾರೆಡ್ಡಿ, ಹರೀಂದ್ರ, ರಮೇಶ್ ಮತ್ತಿತರರಿದ್ದರು.
ನ.23, 24ಕ್ಕೆ ರಾಜ್ಯ ಸಮ್ಮೇಳನ:ಅಖೀಲ ಭಾರತ ವಕೀಲರ ಸಂಘದ ರಾಜ್ಯ ಸಮ್ಮೇಳನವನ್ನು ಬರುವ ನ.23, 24 ರಂದು ಮೈಸೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಒಂದು ವೇಳೆ ಮೈಸೂರಿನಲ್ಲಿ ಸಾಧ್ಯವಾಗದಿದ್ದರೆ ಬೆಂಗಳೂರಿನಲ್ಲಿ ಆಯೋಜಿಸಲು ರಾಜ್ಯ ಸಮತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಲ್ಲದೇ ರಾಷ್ಟ್ರೀಯ ಸಮ್ಮೇಳನ ಕೇರಳದ ಕೊಚ್ಚಿಯಲ್ಲಿ ಡಿ.27 ರಿಂದ 29ರ ವರೆಗೂ ನಡೆಯಲಿದ್ದು, ರಾಜ್ಯದಿಂದ ಭಾಗವಹಿಸುವ ಪ್ರತಿನಿಧಿಗಳ ಬಗ್ಗೆ ವಿಶೇಷವಾಗಿ ರಾಜ್ಯ ಸಮ್ಮೇಳನದ ಬಗ್ಗೆ ರಾಜ್ಯ ಅಖೀಲ ಭಾರತ ವಕೀಲರ ಸಂಘದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷರಾದ ವಕೀಲ ಶಂಕರಪ್ಪ ತಿಳಿಸಿದರು.