Advertisement

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

12:06 AM Jul 09, 2024 | Team Udayavani |

ಮಂಗಳೂರು: ಮಂಗಳೂರು ಪಾಲಿಕೆಯ ಕಮಿಷನರ್‌ ಆನಂದ್‌ ಸಿ.ಎಲ್‌. ಅವರ ವರ್ಗಾವಣೆ ಆದೇಶವನ್ನು ಸರಕಾರ ರದ್ದುಗೊಳಿಸಿದೆ.

Advertisement

ಅನಂದ್‌ ಅವರು 2023ರ ಜೂ. 28ರಂದು ಮಂಗಳೂರು ಪಾಲಿಕೆಯ ಕಮಿಷನರ್‌ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ಈ ನಡುವೆ ಸರಕಾರ ಜು. 4ರಂದು ಹುದ್ದೆ ಗೊತ್ತುಪಡಿಸದೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಶಿವಮೊಗ್ಗದ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್‌ ಅವರನ್ನು ಮಹಾನಗರ ಪಾಲಿಕೆಯ ಕಮಿಷನರ್‌ ಸ್ಥಾನಕ್ಕೆ ನಿಯೋಜನೆ ಮಾಡಿತ್ತು.

ಆದರೆ ಅವಧಿಗೂ ಮುನ್ನವೇ ವರ್ಗಾವಣೆ ಆದೇಶ ಬಂದಿದೆ ಎನ್ನುವ ಕಾರಣಕ್ಕೆ ಆನಂದ್‌ ಸಿ.ಎಲ್‌. ಅವರು ಸರಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಆದೇಶವನ್ನು ರದ್ದುಪಡಿಸಲಾಗಿದೆ. ಆನಂದ್‌ ಅವರು ಮಂಗಳೂರು ಪಾಲಿಕೆಯ ಕಮಿಷನರ್‌ ಆಗಿ ಮುಂದುವರಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next