Advertisement

ಇಂದಿನ ಸಭೆಯಲ್ಲಿ ಅಭ್ಯರ್ಥಿ ಫೈನಲ್‌:ಸಚಿವ ಜಾರಕಿಹೊಳಿ 

01:37 AM Mar 03, 2019 | Team Udayavani |

ಬೆಳಗಾವಿ: ರಾಜ್ಯ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಮಾ.3ರಂದು ನಡೆಯಲಿರುವ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಹೆಸರು ಅಂತಿಮಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶಜಾರಕಿಹೊಳಿ ಹೇಳಿದರು.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ಕೈದು ಜನ ಆಕಾಂಕ್ಷಿಗಳಿದ್ದು, ಅಂತಿಮ ನಿರ್ಧಾರ ಸಭೆಯಲ್ಲಿ ಆಗಲಿದೆ ಎಂದರು. “ಲೋಕಸಭೆಗೆ ನಾನು ಸ್ಪರ್ಧಿಸುವುದಿಲ್ಲ. ಮೊದಲೂ ಹೇಳಿದ್ದೆ, ಈಗಲೂ ಪುನರುಚ್ಚರಿಸುತ್ತಿದ್ದೇನೆ. ಯಾರಿಗೆ ಟಿಕೆಟ್‌ ಸಿಗುತ್ತದೋ ಅವರ ಪರ ಪ್ರಚಾರ ನಡೆಸಿ ಗೆಲ್ಲಿಸಲಾಗುವುದು’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next