Advertisement

ಇಂದು ಸಂಜೆಯೊಳಗೆ ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಅಂತಿಮ: ಸಿಎಂ ಬೊಮ್ಮಾಯಿ

10:54 AM May 29, 2022 | Team Udayavani |

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತಾರೆ. ಮೂರನೇ ಅಭ್ಯರ್ಥಿಯ ಬಗ್ಗೆಯೂ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದರು.

ಸಿಎಂ ಭೇಟಿ ಮಾಡಿದ ಜಿಟಿಡಿ: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ರವಿವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಇದನ್ನೂ ಓದಿ:ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಭಾ.ಮ.ಹರೀಶ್ ಆಯ್ಕೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, 2021ರಲ್ಲಿ ಮೈಸೂರಿನಲ್ಲಿ ಮಳೆಹಾನಿಯಿಂದ ಕೆರೆಕಟ್ಟೆಗಳು ಒಡೆದು ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಹಾನಿಯಾಗಿತ್ತು. ಹೀಗಾಗಿ 138 ಕೋಟಿ ರೂ. ಪ್ರಪೋಸಲ್ ಕಳುಸಲಾಗಿತ್ತು. ಅದು ಇದುವರೆಗೂ ಬಿಡುಗಡೆಯಾಗಿರಲಿಲ್ಲ. ಆದರೆ ಶಾಸಕ ರಾಮದಾಸ್ ಕ್ಷೇತ್ರಕ್ಕೆ 40 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಆದರೆ ನಾನು ಎರಡು ಸಲ ಪ್ರಪೋಸಲ್ ಕೊಟ್ಟಿದ್ದರು ಆಗಿರಲಿಲ್ಲ. ದಯವಿಟ್ಟು ಹಣ ಬಿಡುಗಡೆ ಮಾಡಿ ಎಂದು ನಾನು ಹೇಳಿದ್ದೆ. ದಾವೋಸ್ ಗೆ ಹೋಗಿ ಬಂದಮೇಲೆ ಮಾಡುತ್ತೇನೆ ಎಂದಿದ್ದರು. ಹೀಗಾಗಿ ನಾನು ಖುದ್ದಾಗಿ ಬಂದು ಭೇಟಿ ಮಾಡಿದ್ದೇನೆ. ತುರ್ತಾಗಿ 27 ಕೋಟಿ ರೂ. ಬಿಡುಗಡೆ ಮಾಡಲು ಸಿಎಂ ಸೂಚಿಸಿದ್ದಾರೆ ಎಂದು ಜಿ.ಟಿ.ದೇವೇಗೌಡ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next