Advertisement

ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ..: ಒಂದೇ ಗ್ರಾಮ ಪಂಚಾಯತಿಯ 10 ಸದಸ್ಯರು ರಾಜೀನಾಮೆ

10:40 AM Feb 23, 2023 | Team Udayavani |

ಚಿಕ್ಕಮಗಳೂರು: ಪ್ರಾಮಾಣಿಕವಾಗಿ ಕೆಲಸ ಮಾಡಲಾಗುತ್ತಿಲ್ಲ ಎಂಬ ಕಾರಣಕ್ಕೆ ಒಂದೇ ಗ್ರಾಮ ಪಂಚಾಯತಿಯ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

Advertisement

ಅಧ್ಯಕ್ಷರು, ಉಪಾಧ್ಯಕ್ಷರು ಸೇರಿ 10 ಮಂದಿ ಸದಸ್ಯರು ರಾಜೀನಾಮೆ ನೀಡಿದ್ದಾರೆ. ರಸ್ತೆ ಅಗಲೀಕರಣ, ಲೇಔಟ್ ನಿರ್ಮಾಣಕ್ಕೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ.  ಮಳೆಯಿಂದ ಕುಸಿದ 17 ಮನೆಗಳ ಸ್ಥಳಾಂತರಕ್ಕೂ ಅಧಿಕಾರಿಗಳು ಸಹಕರಿಸುತ್ತಿಲ್ಲ ಎಂದು ಚುನಾಯಿತ ಸದಸ್ಯರು ಬೇಸರಿಸಿದ್ದಾರೆ. ಅಧಿಕಾರಿಗಳ ವರ್ತನೆಯಿಂದ ಮನನೊಂದು, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ:3 ಗಂಟೆ ಹೃದಯ ಬಡಿತ ನಿಂತರೂ 20 ತಿಂಗಳ ಮಗುವನ್ನು ಉಳಿಸಿದ ವೈದ್ಯರ ತಂಡ.!

ಯಾವ ಕೆಲಸವೂ ಆಗುತ್ತಿಲ್ಲ, ಅಧಿಕಾರಿಗಳು ಮನಸ್ಸು ಮಾಡುತ್ತಿಲ್ಲ. ನಿಮ್ಮ ನಿರ್ಲಕ್ಷ್ಯಕ್ಕೆ ನಮ್ಮ ಉತ್ತರ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತು ಮಂದಿ ಸದಸ್ಯರು ತಾಲೂಕು ಪಂಚಾಯತಿ ಇಓ ಗೆ ರಾಜೀನಾಮೆ‌ ಪತ್ರ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next