Advertisement

ಜಾನುವಾರು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ಪಲ್ಟಿ: ಎಂಟು ಎತ್ತು, ಎಮ್ಮೆಗಳು ಸ್ಥಳದಲ್ಲೇ ಸಾವು

10:22 AM Dec 11, 2020 | keerthan |

ಶಿವಮೊಗ್ಗ: ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ ಎಂಟು ಎತ್ತು ಹಾಗೂ ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.

Advertisement

ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಸಮೀಪ ಈ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಪೊಲೀಸರ ತುರ್ತು ಕಾರ್ಯಚರಣೆಯಿಂದ 6 ಗೋವುಗಳ ರಕ್ಷಣೆ ಮಾಡಲಾಗಿದೆ.

ಇದನ್ನೂ ಓದಿ:ತವರೂರಿನಿಂದ ಬರುತ್ತಿದ್ದವರಿಗೆ ಅಡ್ಡಿಯಾದ ಜವರಾಯ: ಕಾರು- ಸ್ಕೂಟರ್ ಅಪಘಾತದಲ್ಲಿ ಮೂವರು ಸಾವು

ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನ ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿತ್ತು. ಘಟನೆಯಲ್ಲಿ ಕ್ಯಾಂಟರ್ ಚಾಲಕ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next