Advertisement

ಯಳನಾಡು ಕಾಚನಕಟ್ಟೆ ಬಳಿ ಚಿರತೆ ಸೆರೆ

05:05 PM Feb 01, 2021 | Team Udayavani |

ಹುಳಿಯಾರು: ಬುಕ್ಕಾಪಟ್ಟಣ ಅರಣ್ಯ ವಲಯ ವ್ಯಾಪ್ತಿಯ ಹುಳಿಯಾರು ಹೋಬಳಿ ಯಳನಾಡು ಸಮೀಪದ ಕಾಚನಕಟ್ಟೆ ಗಂಗಮ್ಮನ ಕೆರೆ ಬಳಿ ಅರಣ್ಯ ಇಲಾಖೆ ಯವರು ಇಟ್ಟಿದ್ದ ಬೋನಿಗೆ ಭಾನುವಾರ ಚಿರತೆಯೊಂದು ಸೆರೆಯಾಗಿದೆ. ಇದೇ ಸ್ಥಳದಲ್ಲಿ ಸೆರೆಯಾದ 3ನೇ ಚಿರತೆಯಾಗಿದೆ.

Advertisement

ಕಾಚನಕಟ್ಟೆಯಲ್ಲಿ ಚಿರತೆಯ ಕಾಟ ಹೆಚ್ಚಾಗಿದ್ದು ನಾಯಿ, ಕುರಿ ಸೇರಿದಂತೆ ಸಾಕು ಪ್ರಾಣಿಗಳನ್ನು ಹಿಡಿದು ತಿನ್ನುತ್ತಿದೆ. ಇದರಿಂದ ಇಲ್ಲಿನ ನಿವಾಸಿಗಳು ಹಾಗೂ ದಾರಿಹೋಕರಿಗೆ ಆತಂಕ ಉಂಟಾಗಿತ್ತು. ಹಾಗಾಗಿ ಈ ಚಿರತೆ ನಿತ್ಯ ಸಂಚರಿಸುವ ಸ್ಥಳದಲ್ಲಿ ಬೋನಿಟ್ಟು ಸೆರೆ ಹಿಡಿಯಲು ಕ್ರಮವಹಿಸುವಂತೆ ಗ್ರಾಮಸ್ಥರ ಮನವಿ ಮಾಡಿದ್ದರು.

ಆಹಾರಅರಸುತ್ತಾ ಬಂದ ಚಿರತೆ ಇಲಾಖೆ ಯವರು ಇರಿಸಿದ ಬೋನಿಗೆ ಭಾನುವಾರ ಬೆಳಗ್ಗೆ ಬಿದ್ದಿದೆ. ತಿಪಟೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜೆ.ಜಿ.ರವಿ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಎಚ್‌. ಮಲ್ಲಿಕಾರ್ಜುನಪ್ಪ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಟಿ.ಕಿರಣ್‌ ಇತರರು ಇದ್ದರು.

ಇದನ್ನೂ ಓದಿ:ಕುರಿ ಕಾಳಗದಲ್ಲಿದೆ ಸ್ಪರ್ಧಾ ಮನೋಭಾವ

Advertisement

Udayavani is now on Telegram. Click here to join our channel and stay updated with the latest news.

Next