Advertisement

ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ದುರ್ಮರಣ

12:06 AM Feb 14, 2019 | Team Udayavani |

ಹೊನ್ನಾಳಿ: ಕಾರಿನ ಟಯರ್‌ ಸ್ಫೋಟಗೊಂಡು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿಯಾಗಿ ಮೂವರು ಹಾಗೂ ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೂ ಮೃತಪಟ್ಟ ಘಟನೆ ತಾಲೂಕಿನ ಹರಳಹಳ್ಳಿಯಲ್ಲಿ ಸಂಭವಿಸಿದೆ.

Advertisement

ಹರಳಹಳ್ಳಿ ಗ್ರಾಮದ ಬಸ್‌ ನಿಲ್ದಾಣದ ಬಳಿ ಬುಧವಾರ ಸಂಜೆ 5.30ರ ಸುಮಾರಿಗೆ ಅವಘಡ ಸಂಭವಿಸಿದ್ದು ಅರಬಗಟ್ಟೆ ಗ್ರಾಮದ ರಮೇಶ್‌ (38), ಉಷಾ (28), ಚಂದ್ರು (6) ಮತ್ತು ಕಾರು ಚಲಾಯಿಸುತ್ತಿದ್ದ ದಾವಣಗೆರೆಯ ಎಸ್ಸೆಸ್‌ ಲೇಔಟ್‌ ನಿವಾಸಿ, ಗುತ್ತಿಗೆದಾರಜಯದೇವಯ್ಯ ಹಿರೇಮಠ(45) ಮೃತಪಟ್ಟಿದ್ದಾರೆ.

ಬಸ್ಸಿಗಾಗಿ ಕಾಯುತ್ತಿದ್ದರು: ಮೃತಪಟ್ಟ ಮೂವರು ಅರಬಗಟ್ಟೆ ಗ್ರಾಮದ ಚೀಲೋಡಿ ಮನೆತನದ ಒಂದೇ ಕುಟುಂಬಕ್ಕೆ ಸೇರಿದವರು. ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದರು. ಇದೇ ಮಾರ್ಗದಲ್ಲಿ ಗುತ್ತಿಗೆದಾರ ಜಯದೇವಯ್ಯ ತಮ್ಮ ಕಾರಿನಲ್ಲಿ ಶಿವಮೊಗ್ಗದಿಂದ ದಾವಣಗೆರೆಗೆ ತೆರಳುತ್ತಿದ್ದರು. ಗ್ರಾಮದ ಬಸ್‌ ನಿಲ್ದಾಣದ ಸಮೀಪದಲ್ಲೇ ಇವರ ಕಾರಿನ ಟಯರ್‌ ಸ್ಫೋಟಗೊಂಡಿದೆ. ಪರಿಣಾಮ ನಿಯಂತ್ರಣ ತಪ್ಪಿ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿ ಕ್ಷಣಾರ್ಧದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ಹರಿದಿದೆ.
 

Advertisement

Udayavani is now on Telegram. Click here to join our channel and stay updated with the latest news.

Next