Advertisement

Road mishap; ನಿಡಿಗಲ್‌ ಶಾಲೆ ಬಳಿ ಕಾರು, ಬೈಕ್‌ ಅಪಘಾತ

12:25 AM Mar 09, 2024 | Team Udayavani |

ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್‌ ಶಾಲೆ ಬಳಿ ಕಾರು ಮತ್ತು ಬೈಕ್‌ ಮಧ್ಯೆ ಉಂಟಾದ ಅಪಘಾತದಲ್ಲಿ ಬೈಕ್‌ ಸವಾರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

Advertisement

ಚಿತ್ರದುರ್ಗದ ಚಿದಾನಂದಯ್ಯ (51) ಎಂಬವರು ಉಜಿರೆ ಕಡೆಯಿಂದ ಚಾರ್ಮಾಡಿ ಕಡೆ ಹೋಗು ತ್ತಿದ್ದ ವೇಳೆ ಬೆಂಗಳೂರಿನ ಸೋಮೇಶ್‌ ಎಂಬಾತ ಚಲಾಯಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬಂದಿದ್ದು, ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಭರ ದಲ್ಲಿ ಮುಂಭಾಗದಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದಿದೆ. ಬೈಕ್‌ ಸವಾರನ ಕಾಲಿನ ಮೂಳೆ ಮುರಿತ ವಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಟ್ರಾಫಿಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next