Advertisement

ಭೀಕರ ಅಪಘಾತ : ಜಾಲ್ಸೂರು ಬಳಿ ಕಾರಿಗೆ ಲಾರಿ ಡಿಕ್ಕಿ ; ಒಂದೇ ಕುಟುಂಬದ ನಾಲ್ವರ ದುರ್ಮರಣ

09:47 AM Oct 02, 2019 | Team Udayavani |

ಸುಳ್ಯ: ಇಲ್ಲಿನ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನ ಕಟ್ಟೆ ಸಮೀಪ ಇಂದು ಸಂಜೆ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Advertisement

ಅಪಘಾತದಲ್ಲಿ ಮೃತಪಟ್ಟವರನ್ನು ಮಡಿಕೇರಿಯ ಮೊಣ್ಣಂಗೇರಿಯವರೆಂದು ತಿಳಿದುಬಂದಿದೆ. ಅಪಘಾತಕ್ಕೀಡಾದ ಕಾರು ಪುತ್ತೂರಿನಿಂದ ಮಡಿಕೇರಿ ಕಡೆಗೆ ಸಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಕಾರು ಅಡ್ಕಾರು ಮಾವಿನಕಟ್ಟೆ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಈಚರ್ ಲಾರಿ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಐವರ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡಿದ್ದ ಇನ್ನೊಬ್ಬರು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರೆ ಇನ್ನೋರ್ವ ಗಾಯಾಳುವನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಅಪಘಾತಕ್ಕೀಡಾದ ಕಾರಿನಲ್ಲಿದ್ದವರನ್ನು ನಾಪೊಕ್ಲುವಿನ ಮೂಲೆ ಕೊಟ್ಟುಮುಡಿಯ ಹಸೈನಾರ್ ಹಾಜಿ ಮತ್ತು ಅವರ ಮಕ್ಕಳೆಂಬ ಮಾಹಿತಿ ಪ್ರಾಥಮಿಕ ಮೂಲಗಳಿಂದ ಲಭಿಸಿದೆ. ಹಸೈನಾರ್ ಹಾಜಿ ಮತ್ತು ಅವರ ಮಕ್ಕಳಾದ ಮಹಮ್ಮದ್ (4೦ವ), ಅಬ್ದುಲ್ ರಹಿಮಾನ್ (36 ), ಇಬ್ರಾಹಿಂ (33ವ) ಮೃತಪಟ್ಟವರೆಂದು ತಿಳಿದುಬಂದಿದೆ.

ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರೋರ್ವರನ್ನು ನೋಡಿ ಈ ಕುಟುಂಬ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next