Advertisement

ಮಹದೇಶ್ವರ ದರ್ಶನಕ್ಕೆ ಬರುತ್ತಿದ್ದ ಭಕ್ತರಿದ್ದ ಕಾರು ಅಪಘಾತ : ಆರು ಮಂದಿಗೆ ಗಾಯ

11:27 AM Jul 12, 2021 | Team Udayavani |

ಹನೂರು:(ಚಾಮರಾಜನಗರ): ಪ್ರಸಿದ್ದ ಪ್ರವಾಸಿ ತಾಣವಾಗಿರುವ ಮಲೆ ಮಹದೇಶ್ವರ ದರ್ಶನ ಪಡೆಯಲು ಕಾರಿನಲ್ಲಿ ಬರುತ್ತಿದ್ದ ಭಕ್ತರ ಕಾರೊಂದು ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಘಾತಕ್ಕೊಳಗಾದ ಘಟನೆ ಮಹದೇಶ್ವರ ಬೆಟ್ಟದ ತಾಳಬೆಟ್ಟ ಸಮೀಪದ ತಡರಾತ್ರಿ ನಡೆದಿದೆ.

Advertisement

ಮೈಸೂರು ಜಿಲ್ಲೆಯ ವಾಜಮಂಗಲ ಗ್ರಾಮದಿಂದ ಆರು ಮಂದಿ ಸ್ವಿಫ್ಟ್ ಕಾರಿನಲ್ಲಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ದೇವರ ದರ್ಶನಕ್ಕೆ ಬರುತ್ತಿದ್ದರು. ತಡರಾತ್ರಿ ಸುಮಾರು 1.30 ರ ವೇಳೆಯಲ್ಲಿ ಕಾರು ಅಪಘಾತಕ್ಕೊಳಗಾಗಿದ್ದು, ಕಾರಿನಲ್ಲಿದ್ದಆರು ಮಂದಿಗೆ ಗಾಯಗಳಾಗಿದೆ. ಇವರಲ್ಲಿ ಇಬ್ಬರಿಗೆ ತೀವ್ರತರವಾದ ಗಾಯವಾಗಿದೆ.

ಇದನ್ನೂ ಓದಿ:ಶಾಸಕ ಸುನೀಲ್ ಕುಮಾರ್ ಸೇರಿ BJP ಮುಖಂಡರ ವಿರುದ್ಧ ಮಾನನಷ್ಟ ಮೊಕದ್ದಮೆ: ರಾಧಾಕೃಷ್ಣ ಹಿರ್ಗಾನ

ಮೈಸೂರು ಜಿಲ್ಲೆಯ ವಾಜ ಮಂಗಲ ಗ್ರಾಮದ ಬಸವರಾಜು (23 ವ), ಗಣೇಶ್ ( 23 ವ)  ನವೀನ್ (23 ವ) ಪ್ರತಾಪ್ (25 ವ) ಡಿ.ಶ್ರೀನಿವಾಸ್ (25 ವ)  ಅಜಯ್ (22 ವ) ಎಂಬುವವರಿಗೆ ಗಾಯಗೊಂಡಿದ್ದಾರೆ. ಬಸವರಾಜು ಮತ್ತು ಗಣೇಶ್ ರವರಿಗೆ ತೀವ್ರತರವಾದ ಪೆಟ್ಟಾಗಿದೆ. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರಗೆ ಕಳುಹಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ತಡರಾತ್ರಿ ಪೊಲೀಸರು ಮತ್ತು ಅಗ್ನಿ ಶಾಮಕ ದಳದವರು ಆಗಮಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next