Advertisement

ಬೈಕ್-ಕಾರು ಮುಖಾಮುಖಿ: ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

09:35 AM Nov 07, 2022 | Team Udayavani |

ಶಿವಮೊಗ್ಗ: ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಸಂಭವಿಸಿ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ರವಿವಾರ ರಾತ್ರಿ ಸಂಭವಿಸಿದೆ.

Advertisement

ಹಲುಗಿನಕೊಪ್ಪದ ಜ್ಯೋತಿ (30 ವ), ಗಂಗಮ್ಮ (50 ವ) ಮತ್ತು ಸೌಜನ್ಯ (4 ವ) ಮೃತರು. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.

ಮಲ್ಲಿಕಾರ್ಜನ, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ತೆರಳುತ್ತಿದ್ದರು. ಇವರು ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ಹೋಗುತ್ತಿದ್ದರು. ಕಾರು ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿತ್ತು.

ಇದನ್ನೂ ಓದಿ:ಮಹಾರಾಷ್ಟ್ರದತ್ತ ಭಾರತ್ ಜೋಡೋ ಯಾತ್ರೆ: ರಾಹುಲ್ ಜತೆ ಸೇರುತ್ತಾರಾ ಉದ್ಧವ್ ಠಾಕ್ರೆ

ಮಂಚಿಕೊಪ್ಪ ಬಳಿ ಕಾರು, ಬೈಕು ಮುಖಾಮುಖಿ ಢಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಗಂಗಮ್ಮ ನಿಧನರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಅಸುನೀಗಿದ್ದಾರೆ. ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದೆ.

Advertisement

ಘಟನೆಯಲ್ಲಿ ಬೈಕು ನುಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next