Advertisement

ಆಕಸ್ಮಿಕ ಬೆಂಕಿಯಿಂದ ಭಸ್ಮವಾದ ಕಾರು; ಪ್ರಾಣಾಪಾಯದಿಂದ ಪಾರಾದ ಮೂವರು

09:21 PM Dec 31, 2022 | Team Udayavani |

ತುಮಕೂರು: ಬೆಂಗಳೂರಿನಿಂದ ಗೋವಾಕ್ಕೆ ಹೋಗುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ತತ್ ಕ್ಷಣ ಕಾರು ನಿಲ್ಲಿಸಿ ಕಾರಿನಿಂದ ಹೊರ ಜಿಗಿದ ಮೂರು ಜನ ಪ್ರಾಣಪಾಯದಿಂದ ಪಾರಾಗಿದ್ದಾರೆ.

Advertisement

ಎಲ್ಎಸ್ ಪಾಳ್ಯ ಗೇಟ್ ಬಳಿ ಘಟನೆ ನಡೆದಿದ್ದು, ಕೆಲವೇ ಸೆಕೆಂಡುಗಳಲ್ಲಿ ಕಾರಿನಲ್ಲಿ ಬೆಂಕಿ ವ್ಯಾಪಿಸಿ ಸಂಪೂರ್ಣ ಸುಟ್ಟು ಹೋಗಿದೆ.

ಘಟನೆ ಕುರಿತು ತಿಳಿದ ತತ್ ಕ್ಷಣ ಅಗ್ನಿಶಾಮಕ ದಳ ಹಾಗೂ ಕಳ್ಳಂಬೆಳ್ಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next