Advertisement

ಆರೋಪಿಗಳ ಐಶಾರಾಮಿ ಕಾರು ಮಾರಾಟ ಪ್ರಕರಣ, ಕಬ್ಬಳ್ ರಾಜ್ ಸೇರಿ ಇಬ್ಬರು ಪೊಲೀಸರು ಅಮಾನತು

03:26 PM Feb 27, 2021 | Team Udayavani |

ಮಂಗಳೂರು: ಪ್ರಕರಣವೊಂದರ ಆರೋಪಿಗಳಿಗೆ ಸೇರಿದ ಕಾರನ್ನು ಸಿಸಿಬಿ ಪೊಲೀಸರು (ನಗರ ಅಪರಾಧ ಪತ್ತೆದಳ) ಮಾರಾಟ ಮಾಡಿದ್ದಾರೆನ್ನಲಾದ ಪ್ರಕರಣದಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

Advertisement

ಸಿಸಿಬಿಯ ಈ ಹಿಂದಿನ ಇನ್ಸ್ ಪೆಕ್ಟರ್ ಕಬ್ಬಳ್ ರಾಜ್ ಹಾಗೂ ಎಕನಾಮಿಕ್ ಆ್ಯಂಡ್ ನಾರ್ಕೊಟಿಕ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ರಾಮಕೃಷ್ಞ ಅಮಾನತು ಮಾಡಲಾಗಿದೆ.

ಇದನ್ನೂ ಓದಿ:ಸಿಸಿಬಿ ಪೊಲೀಸರಿಂದ ಕಾರು ಮಾರಾಟ: ನಗರದಲ್ಲಿ ಸಿಐಡಿ ತನಿಖೆ ಆರಂಭ, 4 ಪೊಲೀಸರ ಹೆಸರು ಉಲ್ಲೇಖ

ಪ್ರಕರಣವೊಂದರ ತನಿಖೆ ನಡೆಸುವಾಗ ಆರೋಪಿಗಳಿಂದ ವಶಕ್ಕೆ ಪಡೆದ ಐಶಾರಾಮಿ ಕಾರುಗಳನ್ನು ಈ ಪೊಲೀಸರು ಇಲಾಖೆಗೆ ಹಸ್ತಾಂತರಿಸಿರಲಿಲ್ಲ. ವಶಕ್ಕೆ ಪಡೆದ ಬಿಎಂಡಬ್ಲ್ಯೂ ಮತ್ತು ಪೋರ್ಷ್ ಕಾರನ್ನು ಸ್ವಂತಕ್ಕೆ ಬಳಸಿ, ಜಾಗ್ವಾರ್ ಕಾರನ್ನು ಮಧ್ಯವರ್ತಿಗಳ ಮೂಲಕ ಮಾರಾಟ ಮಾಡಿದ್ದರು ಎಂಬ ಆರೋಪ ಇವರ ಮೇಲಿದೆ.

ಇದನ್ನೂ ಓದಿ: ಮಹಿಳೆಯನ್ನು ಕಟ್ಟಿಹಾಕಿ ಹಾಡಹಗಲೇ ದರೋಡೆಗೆ ಯತ್ನ: ಸಿನಿಮೀಯಾ ರೀತಿಯಲ್ಲಿ ನಡೆಯಿತು ಚೇಸಿಂಗ್

Advertisement

ಸದ್ಯ ಪ್ರಕರಣವನ್ನು ಸಿಐಡಿ ತಂಡ ತನಿಖೆ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next