Advertisement

Car Catches Fire: ಮಡಿಕೇರಿ ಬಳಿ ಬೆಂಕಿಗಾಹುತಿಯಾದ ಕಾರು!

09:28 PM Jul 13, 2024 | Team Udayavani |

ಮಡಿಕೇರಿ (ಕೊಡಗು ಜಿಲ್ಲೆ) : ತಾಂತ್ರಿಕ ದೋಷದಿಂದ ಕಾರೊಂದು ಅಗ್ನಿಗಾಹುತಿಯಾದ ಘಟನೆ ಮಡಿಕೇರಿ ನಗರದ ಸಂಪಿಗೆಕಟ್ಟೆ ಬಳಿ ನಡೆದಿದೆ.

Advertisement

ಮಡಿಕೇರಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಕಾರು ಸುಟ್ಟು ಕರಕಲಾಗಿದೆ. ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಶನಿವಾರ ಬೆಳಗ್ಗೆ ಮಡಿಕೇರಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ತಡೆಗೋಡೆಯೊಂದಕ್ಕೆ ಡಿಕ್ಕಿಯಾದ ಕಾರಣ ಹೆದ್ದಾರಿ ಬದಿ ನಿಲ್ಲಿಸಲಾಗಿತ್ತು. ಸಂಜೆ ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಬೆಂಗಳೂರಿನ ಶ್ರೀನಿವಾಸ್ ಎಂಬುವವರಿಗೆ ಸೇರಿದ ಕಾರು ಇದಾಗಿದೆ.

ಮಡಿಕೇರಿ ಸಂಚಾರಿ ಪೊಲೀಸರು ಹಾಗೂ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯಿಂದ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next