Advertisement

ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು : ಕಾರಿನಲ್ಲಿದ್ದವರು ಅಪಾಯದಿಂದ ಪಾರು

02:20 PM Dec 12, 2020 | sudhir |

ಮಂಗಳೂರು : ಚಲಿಸುತ್ತಿದ್ದ ಕಾರೊಂದು ಬೆಂಕಿ ಹತ್ತಿಕೊಂಡ ಪರಿಣಾಮ ನಡುರಸ್ತೆಯಲ್ಲೇ ಸುಟ್ಟು ಕರಕಲಾಗಿರುವ ಘಟನೆ ನಗರದ ಪಿವಿ ಎಸ್ ಬಳಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಕಾರು ಮುಡಿಪುವಿನಿಂದ ಬಂದಿದ್ದು ನಾಲ್ವರು ಪ್ರಯಾಣಿಕರು ಇದ್ದರು ಎನ್ನಲಾಗಿದೆ ಪಿವಿ ಎಸ್ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಕಾರನ್ನು ನಿಲ್ಲಿಸಿ ನಾಲ್ವರು ಕಾರಿನಿಂದ ಇಳಿದಿದ್ದಾರೆ.

ಕಾರು ಸಂಪೂರ್ಣ ಸುಟ್ಟು ಕಾರಕಲಾಗಿದ್ದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.

ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ಎಂದು ತಿಳಿದುಬಂದಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next