Advertisement

Belagavi: ಪೆಟ್ರೋಲ್ ಬಂಕ್ ನಲ್ಲಿ ಕಾರಿಗೆ ಆಕಸ್ಮಿಕ ಬೆಂಕಿ… ತಪ್ಪಿದ ಭಾರಿ ಅನಾಹುತ

02:30 PM Sep 12, 2023 | Team Udayavani |

ಬೆಳಗಾವಿ: ನಗರದ ಕೃಷ್ಣದೇವರಾಯ ವೃತ್ತ(ಕೊಲ್ಲಾಪುರ ಸರ್ಕಲ್) ಬಳಿಯ ಪೆಟ್ರೋಲ್ ಬಂಕ್ ನಲ್ಲಿ‌ ಪೆಟ್ರೋಲ್ ತುಂಬಿಸಿಕೊಳ್ಳುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

Advertisement

ಬಿ.ಬಿ. ಹೊಸಮನಿ ಆ್ಯಂಡ್ ಸನ್ಸ್ ಅವರಿಗೆ ಸೇರಿದ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಕೊಳ್ಳುವಾಗ ಕಾರಿನ ಮುಂಭಾಗಕ್ಕೆ ಆಕಸ್ಮಿಕ ಬೆಂಕಿ ಹತ್ತಿದೆ. ಆದರೆ ಅದೃಷ್ಟವಶಾತ್ ಭಾರೀ ಪ್ರಮಾಣದ ದೊಡ್ಡ ಅನಾಹುತ ತಪ್ಪಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಪೆಟ್ರೋಲ್ ಬಂಕ್ ನಲ್ಲಿಯ ಸಿಬ್ಬಂದಿ ಕೂಡಲೇ ನೀರು, ಮರಳು ಹಾಕಿ ಬೆಂಕಿ ನಂದಿಸಿದ್ದಾರೆ. ದೊಡ್ಡ ಅವಘಡ ತಪ್ಪಿದೆ. ಕಾರಿನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅದರಲ್ಲಿ ಇದ್ದವರು ಕೂಡಲೇ ಕೆಳಗೆ ಇಳಿದಿದ್ದಾರೆ. ಪೆಟ್ರೋಲ್ ಬಂಕ್ ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ʼKerala Storyʼ ʼಕಾಶ್ಮೀರ್‌ ಫೈಲ್ಸ್‌ʼ.. ನಂತಹ ಸಿನಿಮಾಗಳ ಜನಪ್ರಿಯತೆ ಸಮಾಜಕ್ಕೆ ಅಪಾಯಕಾರಿ

Advertisement

Udayavani is now on Telegram. Click here to join our channel and stay updated with the latest news.

Next