Advertisement

ಡಿವೈಡರ್ ಹಾರಿ ಬಂದ ಕಾರು ಬೈಕ್ ಗೆ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು

09:33 AM Feb 01, 2020 | keerthan |

ರಾಮನಗರ: ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬಂದ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಚನ್ನಪಟ್ಟಣದ  ಮತ್ತೀಕೆರೆಯಲ್ಲಿ ನಡೆದಿದೆ.

Advertisement

ಬೈಕ್ ಸವಾರರಾದ ರಾಹುಲ್ (18), ಅಭಿಷೇಕ್ (20) ಮೃತ ಯುವಕರು. ಘಟನೆಯಲ್ಲಿ ಓರ್ವ ಪಾದಚಾರಿ ಸೇರಿದಂತೆ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ.

ಚನ್ನಪಟ್ಟಣದ  ಬೆಂಗಳೂರು- ಮೈಸೂರು ಹೆದ್ದಾರಿಯ ಮತ್ತೀಕೆರೆಯ ಶಿವಳ್ಳಿ ಹೋಟೆಲ್ ಬಳಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ. ಕಾರು ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿತ್ತು ಎನ್ನಲಾಗಿದೆ.

ಮೃತರಿಬ್ಬರು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕು ಸೀಬನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನೆ ಮಾಡಲಾಗಿದೆ.

Advertisement

ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next