Advertisement

ಡಿವೈಡರ್‌ಗೆ ಢಿಕ್ಕಿಯಾಗಿ ಪಲ್ಟಿಯಾದ ಕಾರು: ಇಬ್ಬರು ಸಾವು

11:09 AM Aug 31, 2021 | Team Udayavani |

ದಾವಣಗೆರೆ: ನಗರದ ಹೊರವಲಯದ ಅಪೂರ್ವ ರೆಸಾರ್ಟ್ ಬಳಿ ಡಿವೈಡರ್‌ಗೆ ಕಾರು ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ.

Advertisement

ಧಾರವಾಡದ ಜಯನಗರದ ನಿವಾಸಿ ವೀಣಾ (32 ವ) ಹಾಗೂ ಬೆಳಗಾವಿ ಜಿಲ್ಲೆಯ ಸಿಂಧೋಗಿ ಗ್ರಾಮದ ವೈಷ್ಣವಿ (6 ವ) ಮೃತರು.

ಧಾರವಾಡ ನಗರದಿಂದ ದೇವರ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಹೋಗುತ್ತಿದ್ದಾಗ ದಾವಣಗೆರೆ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, ಕಾರು ಪಲ್ಟಿಯಾಗಿದೆ.

ಇದನ್ನೂ ಓದಿ:ಸಾರ್ವಜನಿಕ ಗಣೇಶ ಹಬ್ಬ ವಿಚಾರದಲ್ಲಿ ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರ: ಸಿಎಂ

ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮಾರ್ಗ ಮಧ್ಯೆ ಇಬ್ಬರು ಮೃತಪಟ್ಟಿದ್ದಾರೆ.

Advertisement

ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next