Advertisement

ಕಾರು ದ್ವಿಚಕ್ರ ವಾಹನಕ್ಕೆ ಢಿಕ್ಕಿ : ಸವಾರನಿಗೆ ಗಾಯ

08:37 PM Dec 16, 2022 | Team Udayavani |

ವಿಟ್ಲ: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಡಿ.16 ರಂದು ಶುಕ್ರವಾರ ಮಧ್ಯಾಹ್ನ ನಡೆದಿದೆ. ಪುತ್ತೂರು ಸಮೀಪದ ಕುಂಡಡ್ಕ ನಿವಾಸಿ ಕಿರಣ್‌ ಗಾಯಗೊಂಡ ಯುವಕ.

Advertisement

ಪುತ್ತೂರಿನಿಂದ ಮಂಗಳೂರು ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕೊಡಾಜೆ ಎಂಬಲ್ಲಿ ಎದುರಿನಿಂದ ಅತೀ ವೇಗದಿಂದ ಬಂದ ಕಾರು ನೇರವಾಗಿ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.

ಕಾರು ಕೂಡ ರಸ್ತೆಯ ಪಕ್ಕಕ್ಕೆ ಸರಿದು ಹೊಂಡಕ್ಕೆ ವಾಲಿ ನಿಂತಿದೆ. ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ಸವಾರನನ್ನು ರಿಕ್ಷಾದಲ್ಲಿ ಮಾಣಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ 108 ಆ್ಯಂಬುಲೆನ್ಸ್‌ ವಾಹನದ ಮೂಲಕ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next