Advertisement

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಒಂದೇ ಕುಟುಂಬದ ಐವರ ಸಾವು

11:22 PM May 01, 2019 | Team Udayavani |

ಹಿರಿಯೂರು (ಚಿತ್ರದುರ್ಗ ಜಿಲ್ಲೆ): ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಮಕ್ಕಳು ಹಾಗೂ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಮೇಟಿಕುರ್ಕೆ ಬಳಿ ಬುಧವಾರ ಸಂಜೆ ನಡೆದಿದೆ.

Advertisement

ಬೆಂಗಳೂರು ಮೂಲದ ತಾಯಮ್ಮ (50), ಲತಾ (30), ವರ್ಣಿತ (9), ಜಾನ್ಹವಿ (4) ಹಾಗೂ ಸುಶ್ಮಿತಾ (12) ಮೃತಪಟ್ಟವರು. ಕಾರು ಚಾಲಕ ಪ್ರಕಾಶ್‌, ಲಕ್ಷ್ಮೀದೇವಿ ಹಾಗೂ ಮೋಹನ್‌ ಗಾಯಗೊಂಡಿದ್ದಾರೆ. ಈ ಪೈಕಿ ಪ್ರಕಾಶ್‌ ಅವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀದೇವಿ ಹಾಗೂ ಮೋಹನ್‌ಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೂಲತ: ಆಂಧ್ರಪ್ರದೇಶದ ಚಿತ್ತೂರಿನವರಾದ ಇವರೆಲ್ಲರೂ ಬೆಂಗಳೂರಿನಲ್ಲಿ ವಾಸಿಸುತ್ತಿದ್ದರು. ಮೃತಪಟ್ಟವರು ಹಾಗೂ ಗಾಯಾಳುಗಳು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಭದ್ರಾವತಿಯಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ಹೋಗಿದ್ದರು. ಭದ್ರಾವತಿಯಿಂದ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಇನೋವಾದಲ್ಲಿ ಮರಳುತ್ತಿದ್ದರು.

ಮೇಟಿಕುರ್ಕೆ ಸಮೀಪ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರು ಚಾಲಕ, ನಿಯಂತ್ರಣ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ. ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದೆ. ಆಗ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next