Advertisement

ಕಾರು ಢಿಕ್ಕಿ : ಪಾದಚಾರಿ ಸಾವು

08:49 PM Jun 01, 2020 | Sriram |

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರೊಂದು ಅರಂತೋಡಿನ ಬಿಳಿಯಾರು ಬಳಿ ಅಪರಿಚಿತ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂ.1 ರಂದು ಸಂಜೆ ಸಂಭವಿಸಿದೆ.

Advertisement

ಅಡ್ಕಾರಿನ ಕಾರು ಇದಾಗಿದ್ದು, ಪಾದಚಾರಿ ರಸ್ತೆ ದಾಟಿದ ಸಂದರ್ಭ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಸಂದರ್ಭ ಸ್ಥಳದಲ್ಲಿದ್ದವರು ಕಾರು ಚಾಲಕನನ್ನು ತರಾಟೆಗೆತ್ತಿಕೊಂಡ ಘಟನೆ ಕೂಡ ನಡೆಯಿತು. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next