Advertisement

Car crash: ಗಾಯಾಳು ವಿದ್ಯಾರ್ಥಿ ಸಾವು ಮೃತದೇಹ ರಸ್ತೆಯಲ್ಲಿಟ್ಟು ಪ್ರತಿಭಟನೆ

01:13 AM Oct 10, 2023 | Team Udayavani |

ಕಾಸರಗೋಡು: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಇನೋವಾ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉದ್ಯಾವರ ಮಾಡ ಕ್ಷೇತ್ರ ಸಮೀಪದ ನಿವಾಸಿ ರಘುನಾಥ ಆಳ್ವ ಅವರ ಪುತ್ರ, ಮಂಗಳೂರು ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್‌(17) ಅ.8 ರಂದು ಸಾವಿಗೀಡಾದರು. ಅತೀ ವೇಗದಲ್ಲಿ ಕಾರು ಢಿಕ್ಕಿ ಹೊಡೆದ ಪರಿಣಾಮವಾಗಿ ತಲೆಗೆ ಗಂಭೀರ ಗಾಯವಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ರಕ್ಷಿಸಲು ಸಾಧ್ಯವಾಗಲಿಲ್ಲ.

Advertisement

ಕಾರು ಢಿಕ್ಕಿ ಹೊಡೆಯು ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿರುವ ಷಟ³ಥ ಕಾಮಗಾರಿ ಕಾರಣ ಎಂದು ಆರೋಪಿಸಿದ ಸ್ಥಳೀಯರು ಯುಎಲ್‌ಸಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆದಿತ್ಯವಾರ ಮೃತ ದೇಹವನ್ನು ರಸ್ತೆಯಲ್ಲಿರಿಸಿ ಪ್ರತಿಭಟಿಸಿದರು. ಕಾಮಗಾರಿ ಗುತ್ತಿಗೆದಾರರಾಗಿರುವ ಯುಎಲ್‌ಸಿಸಿ ಪ್ರತಿಕ್ರಿಯಿಸದಿದ್ದುದರಿಂದ ಪ್ರತಿಭಟನೆಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ಜಂಕ್ಷನ್‌ಗಳಲ್ಲೂ ಫುಟ್‌ ಬ್ರಿಡ್ಜ್ ನಿರ್ಮಿಸಬೇಕು, ಪಾದಚಾರಿಗಳಿಗೆ ರಸ್ತೆ ದಾಟಲು ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next