Advertisement

ಅರಣ್ಯಾಧಿಕಾರಿ ಕಾರು ಮರಕ್ಕೆ ಢಿಕ್ಕಿ

09:36 AM Jun 23, 2019 | Team Udayavani |

ತೆಕ್ಕಟ್ಟೆ: ಇಲ್ಲಿನ ರಾ. ಹೆ. 66ರಲ್ಲಿ ಮಾರುತಿ ಬ್ರೆಝಾ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಜೂ. 22ರಂದು ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದೆ.

Advertisement

ಕುಂದಾಪುರ ಉಪ ವಲಯ ಅರಣ್ಯಾಧಿಕಾರಿ ಲೋಹಿತ್‌ ಅವರು ಕುಟುಂಬ ಸಹಿತ ಕಾರಿನಲ್ಲಿ ಮಂಗಳೂರು ಏರ್‌ಪೋರ್ಟ್‌ನಿಂದ ಕುಂದಾಪುರದೆಡೆಗೆ ಸಾಗುತ್ತಿತ್ತು. ಈ ಸಂದರ್ಭ ಏಕಾಏಕಿ ಕಾರು ಕುಂಭಾಶಿಯಲ್ಲಿ ಡಿವೈಡರ್‌ಗೆ
ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮರಕ್ಕೆ ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಯಾರಿಗೂ ಗಾಯಗಳಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next