Advertisement

Magadi: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬ ಐವರು ಸಾವು

05:46 PM Sep 17, 2024 | Team Udayavani |

ರಾಮನಗರ: ಭೀಕರ ರಸ್ತೆ ಅಪಘಾತ ನಡೆದು ಸ್ಥಳದಲ್ಲೇ ಐವರು ಸಾವನ್ನಪ್ಪಿದ ಘಟನೆ ಮಾಗಡಿ (Magadi) ಬಳಿ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಗಳವಾರ (ಸೆ.17) ನಡೆದಿದೆ.

Advertisement

ಮಾಗಡಿ ತಾಲ್ಲೂಕಿನ ಭದ್ರಾಪುರ ಗ್ರಾಮದ ಸಮೀಪ ಘಟನೆ ನಡೆದಿದೆ. ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದಿದೆ.

ಘಟನೆಯಲ್ಲಿ ಮಾಗಡಿ ಮೂಲದ ಮೂವರು ಮಹಿಳೆಯರು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮೃತದೇಹ ಹೊರ ತೆಗೆದು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸ್ಥಳಕ್ಕೆ ಕುದೂರು ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next