Advertisement

ರಿಕ್ಷಾಕ್ಕೆ ಕಾರು ಢಿಕ್ಕಿ; 6 ಮಕ್ಕಳಿಗೆ ಗಾಯ

12:30 AM Mar 16, 2019 | Team Udayavani |

ಉಡುಪಿ: ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಆಟೋ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ 6 ಮಕ್ಕಳು ಗಾಯಗೊಂಡ ಘಟನೆ ಸಂತೆಕಟ್ಟೆ ಬಳಿಯ ರಾ. ಹೆದ್ದಾರಿ 66ರ ಸರ್ವೀಸ್‌ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ. ಸಂತೆಕಟ್ಟೆ ಜಂಕ್ಷನ್‌ ಕಡೆಯಿಂದ ಉಡುಪಿಗೆ ಸಾಗುತ್ತಿದ್ದ ಕಾರು ಮುಂದಿನ ವಾಹನವನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತು.

Advertisement

ರಿಕ್ಷಾದಲ್ಲಿದ್ದ ಸೈಂಟ್‌ ಜೋಸೆಫ್ ಮತ್ತು ಸೈಂಟ್‌ ರೊಜಾರಿಯೋ ಶಾಲೆಯ ವಿದ್ಯಾರ್ಥಿಗಳಾದ ಪವಿತ್ರಾ, ಶ್ರೇಯಾ, ಪ್ರಜ್ಞಾ, ಶ್ರಾವ್ಯಾ, ರಕ್ಷಣ್‌, ಪ್ರೇಕ್ಷಣ್‌ ಹಾಗೂ ರಿಕ್ಷಾ ಚಾಲಕ ದಿವಾಕರ್‌ ಪಾಲನ್‌ ಗಾಯಗೊಂಡರು. ಸ್ಥಳೀಯರು ಗಾಯಾಳುಗಳನ್ನು  ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಚಾಲಕ ಜಾರ್ಜ್‌ ಡಿ’ಸೋಜಾ ವಿರುದ್ಧ ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೋಟ ಶ್ರೀನಿವಾಸ ಪೂಜಾರಿ ಭೇಟಿ
ಅಪಘಾತದ ಬಗ್ಗೆ ಮಾಹಿತಿ ಪಡೆದ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಗಾಯಾಳು ವಿದ್ಯಾರ್ಥಿಗಳು ದಾಖಲಾಗಿರುವ ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next