Advertisement

ಬೊಲೆರೊ ಢಿಕ್ಕಿ ಆರೋಪಿತ ಕಾರು ಚಾಲಕನಿಗೆ ನ್ಯಾಯಾಂಗ ಬಂಧನ

11:43 AM Jul 29, 2024 | Team Udayavani |

ಬೆಳ್ತಂಗಡಿ: ಮುಂಡಾಜೆ ಸೀಟು ಸಮೀಪ ತಂದೆ ಮತ್ತು ಮಗಳು ಸಂಚರಿಸುತ್ತಿದ್ದ ಬೈಕ್‌ಗೆ ಜು. 27ರಂದು ಬೊಲೆರೊ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಲಾಗಿದೆ.

Advertisement

ಆರೋಪಿತ ಬೊಲೆರೊ ಚಾಲಕ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಗಂಡಿಬಾಗಿಲು ನಿವಾಸಿ ಪ್ರಶಾಂತ (31) ಅವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘಟನೆಯಲ್ಲಿ ಕಲ್ಮಂಜ ಗ್ರಾಮದ ಕುಡೆಂಚಿ ನಿವಾಸಿ, ಉಜಿರೆ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಅನರ್ಘ್ಯಾ (10) ಅವರ ಮೇಲೆ ಬೊಲೆರೊ ಸಾಗಿದ ಪರಿಣಾಮ ಗಂಭೀರ ಗಾಯಗೊಂಡ ಬಾಲಕಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದರು.

ತಂದೆ ಗುರುಪ್ರಸಾದ್‌ ಗೋಖಲೆ ಅವರು ಕಾಲು ಮುರಿತಕ್ಕೊಳಗಾಗಿದ್ದು, ಆ ನೋವಿನಲ್ಲಿ ಪುತ್ರಿಯ ಅಂತ್ಯಸಂಸ್ಕಾರ ನಡೆಸಿದ್ದರು. ಅವರಿಗೆ ಜು. 28ರಂದು ಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಘಟನೆ ವಿಚಾರವಾಗಿ ನೂರಾರು ಮಂದಿ ಆಸ್ಪತ್ರೆಗೆ ಧಾವಿಸಿದ್ದು, ಆರೋಪಿಗೆ ಕಠಿನ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಜು. 29ರಂದು ಪೊಲೀಸ್‌ ಠಾಣೆಗೆ ಮನವಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next