Advertisement

ಅಪಘಾತವಾಗಿ ತಪ್ಪಿಸಿಕೊಳ್ಳುವ ಆತುರದಲ್ಲಿ ನಾಲೆಗೆ ಇಳಿದ ಕಾರು! ತಪ್ಪಿದ ಭಾರೀ ಅನಾಹುತ

12:29 PM Oct 10, 2021 | Team Udayavani |

ಚಿಕ್ಕಮಗಳೂರು: ಅಪಘಾತವಾಗಿ ತಪ್ಪಿಸಿಕೊಳ್ಳುವ ಆತುರದಲ್ಲಿ ಕಾರೊಂದು ನಾಲೆಗೆ ಇಳಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Advertisement

ಲಕ್ಕವಳ್ಳಿ ಗ್ರಾಮದ ತಿರುವಿನಲ್ಲಿ ಕಾರು-ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ, ಪರಿಣಾಮ ಬೈಕ್ ಸವಾರ ಬೈಕಿನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಗಾಬರಿಯಿಂದ ಕಾರು ಚಾಲಕ ತಪ್ಪಿಸಿಕೊಳ್ಳಲು ಯತ್ನಿಸಿ ಗಲ್ಲಿ ರಸ್ತೆಗಳಲ್ಲಿ ಸಂಚಾರಿಸುವಾಗ ನಿಯಂತ್ರಣ ತಪ್ಪಿ ಕಾರು ನಾಲೆಗೆ ಇಳಿದಿದೆ.

ಇದನ್ನೂ ಓದಿ:ಅಪಘಾತ ಹೆಚ್ಚಳ ತಡೆಗೆ ರಾತ್ರಿ ವಾಹನ ತಪಾಸಣಿ

ಬೈಕಿನಿಂದ ಬಿದ್ದವರಿಗೂ ಏನೂ ಆಗಿರಲಿಲ್ಲ. ನಾಲೆಯಲ್ಲಿ ನೀರು ನಿಲ್ಲಿಸಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಕಾರಿನಲ್ಲಿದ್ದವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಕ್ಕವಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next