Advertisement

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

08:01 PM Apr 23, 2024 | Team Udayavani |

ಗದಗ: ಜಿಲ್ಲೆಯ ಗಜೇಂದ್ರಗಡ ಸಮೀಪದ ದಕ್ಷಿಣ ಕಾಶಿ ಪ್ರಸಿದ್ಧಿಯ ಕಾಲಕಾಲೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅಪಾರ ಭಕ್ತ ಜನಸ್ತೋಮದ ಮಧ್ಯೆ ಮಂಗಳವಾರ ಮಹಾರಥೋತ್ಸವ ಅದ್ದೂರಿಯಿಂದ ನೆರವೇರಿತು.

Advertisement

ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ರಥವನ್ನು ಎಳೆದು ಪುನೀತರಾದರು. ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥಗಳು ನೆರವೇರಿಸು ಎಂದು ಪ್ರಾರ್ಥಿಸಿದರು.

ಜಾತ್ರಾ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ಕಾಲಕಾಲೇಶ್ವರ ದೇಗುಲದಲ್ಲಿ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

Advertisement

Udayavani is now on Telegram. Click here to join our channel and stay updated with the latest news.

Next