Advertisement

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

11:53 AM Oct 22, 2021 | Team Udayavani |

ಬಾಗಲಕೋಟೆ: ಕಾರು ಪಲ್ಟಿಯಾಗಿ ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ.

Advertisement

ಜಮಖಂಡಿಯಿಂದ ರಾಮದುರ್ಗ ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಲೋಕಾಪೂರ ಪಟ್ಟಣದ ಸಮೀಪ ರಸ್ತೆಯಿಂದ ನೀರಿಲ್ಲದ ಕಾಲುವೆಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಮೃತ ಪಟ್ಟವರನ್ನು ಕಾರು ಚಾಲಕ ಸುನೀಲ್ (24 ವ), ಮಹಾದೇವ ಪಾಟೀಲ್ (27 ವ), ಎರಿತಾ ಕಂಬಾರ(26 ವ), ವಿಜಯ್ (26 ವ) ಎಂದು ಗುರುತಿಸಲಾಗಿದೆ. ಇವರೆಲ್ಲ ರಾಮದುರ್ಗ ತಾಲೂಕಿನ ಗುಡಮ್ಮನಾಳ ಗ್ರಾಮದವರು ಎನ್ನಲಾಗಿದೆ.

ಕ್ರೇನ್ ಸಹಾಯದಿಂದ ಕಾರು ಸಹಿತ ಮೃತದೇಹಗಳು ಹೊರಕ್ಕೆ ತೆಗೆಯಲಾಗಿದೆ. ಘಟನೆಯಲ್ಲಿ ಇನ್ನೂ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Advertisement

ಇದನ್ನೂ ಓದಿ:ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದ ಭಟ್ರು ಟೀಮ್ : ಶೀಘ್ರದಲ್ಲೇ ಬಾಕಿ ಸುದ್ದಿ

ಸ್ಥಳಕ್ಕೆ ಲೋಕಾಪೂರ ಪೊಲೀಸರು ಭೇಟಿ ನೀಡಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಲೋಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next