Advertisement

ಕಾಪು: ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು ; ಮೂವರ ಸ್ಥಿತಿ ಗಂಭೀರ

04:33 PM Sep 11, 2020 | keerthan |

ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐದು ಮಂದಿ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದಿದೆ.

Advertisement

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಕಾಪು ಹಳೇ ಮೆಸ್ಕಾಂ ಕಛೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಉರುಳಿ ಬಿದ್ದಿದೆ.

ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಐದು ಮಂದಿಯ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಎಸ್ಸೈ ರಾಜಶೇಖರ ಬಿ. ಸಾಗನೂರು, ಕ್ರೈಂ ಎಸ್ಸೈ ಐ.ಆರ್. ಗಡ್ಡೇಕರ್ ಮೊದಲಾದವರು ಭೇಟಿ ನೀಡಿದ್ದಾರೆ.

Advertisement

ಇದನ್ನೂ ಓದಿ: ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ಬಾಲಕರು ಇಂದು ಶವವಾಗಿ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next