Advertisement

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಗುದ್ದಿ ಪಲ್ಟಿಯಾದ ಕಾರು: ಚಾಲಕನಿಗೆ ಗಂಭೀರ ಗಾಯ

03:58 PM Feb 06, 2021 | Team Udayavani |

ಉಡುಪಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯೊಂದಕ್ಕೆ ಗುದ್ದಿ ಪಲ್ಟಿಯಾದ ಘಟನೆ ಹಿರಿಯಡಕದ ಕೊಂಡಾಡಿಯ ಭಜನೆಕಟ್ಟೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ ಕೂಲಿ ಕಾರ್ಮಿಕರೊಬ್ಬರಿಗೆ ಗಾಯವಾಗಿದೆ.

Advertisement

ಕಾರು ಚಾಲಕ ಹರಿಣ್ ಶೆಟ್ಟಿ ಎಂಬುವವರು ಕಾರ್ಕಳದಿಂದ ಉಡುಪಿ ಕಡೆಗೆ ಬರುತ್ತಿದ್ದು, ಈ ವೇಳೆ ಹಿರಿಯಡಕದ ಕೊಂಡಾಡಿಯ ಭಜನೆಕಟ್ಟೆ ಸಮೀಪಿಸುತ್ತಿದ್ದಂತೆ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದಲ್ಲಿರುವ ಪುತ್ತು ನಾಯಕ್ ಎಂಬುವವರ ಮನೆಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಕಾರು ಢಿಕ್ಕಿಯಾದ ರಭಸಕ್ಕೆ ಮನೆಯ ಒಂದು ಭಾಗ ಸಂಪೂರ್ಣ ಕುಸಿದುಬಿದ್ದಿದೆ.

ಕಾರಿನ ಮುಂಭಾಗ ಜಖಂಗೊಂಡಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರಿಗೆ ಗಾಯವಾಗಿದೆ. ಹಿರಿಯಡಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next