Advertisement

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

11:01 PM Jun 18, 2024 | Team Udayavani |

ಬಂಟ್ವಾಳ: ರಾ.ಹೆ.75ರ ಪೆರ್ನೆ ಸಮೀಪದ ಅಮೈಯಲ್ಲಿ ಬೈಕಿಗೆ ಕಾರೊಂದು ಹಿಂಬದಿಯಿಂದ ಢಿಕ್ಕಿಯಾಗಿ ಸಹಸವಾರ ಗಾಯಗೊಂಡಿದ್ದು, ಕಾರು ಚಾಲಕ ನಿಲ್ಲಿಸದೆ ಪರಾರಿಯಾದ ಘಟನೆ ಜೂ. 16ರಂದು ನಡೆದಿದೆ.

Advertisement

ಗಾಯಗೊಂಡಿರುವ ಬೈಕ್‌ ಸಹಸವಾರ ತೆಕ್ಕಾರು ನಿವಾಸಿ ತಿಮ್ಮಪ್ಪ ಪೂಜಾರಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಅವರು ಪುತ್ರ ಲಿತಿನ್‌ ಚಲಾಯಿಸುತ್ತಿದ್ದ ಬೈಕಿನಲ್ಲಿ ಬುಡೋಳಿ ಕಡೆಯಿಂದ ತೆಕ್ಕಾರು ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.

ಚಾಲಕ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಹಿಂದಿನಿಂದ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next