Advertisement

ನಾವುಂದ: ಬಸ್ಸಿಗೆ ಹಿಂಬದಿಯಿಂದ ಕಾರು ಢಿಕ್ಕಿ; ಓರ್ವ ಗಂಭೀರ, ಮೂವರಿಗೆ ಗಾಯ

02:58 PM Jul 05, 2022 | Team Udayavani |

ಕುಂದಾಪುರ :  ಕಾರೊಂದು ಬಸ್ಸಿಗೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಮೂವರು ಗಾಯಗೊಂಡ ಘಟನೆ ಬೈಂದೂರು – ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ನಾವುಂದದಲ್ಲಿ ಮಂಗಳವಾರ ನಡೆದಿದೆ.

Advertisement

ಬಸ್ ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು.‌ ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಬಸ್ಸಿಗೆ ಢಿಕ್ಕಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್ ನಾಯಕ್ ಭೇಟಿ ನೀಡಿದ್ದು, ಬೈಂದೂರು ಠಾಣೆಯಲ್ಲಿ ದಾಖಲಾಗಿದೆ.

ಗಾಯಾಳಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಗಂಗೊಳ್ಳಿ 24x 7 ಚಾಲಕ ಕೃಷ್ಣ ನೆರವಾದರು. ಗಾಯಾಳುಗಳ ಗುರತು ಪತ್ತೆ ಇನ್ನಷ್ಟೇ ಲಭ್ಯವಾಗಬೇಕಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next