Advertisement

ರಾಮನಗರ: ಬಸ್ಸಿಗೆ ಢಿಕ್ಕಿ ಹೊಡೆದ ಕಾರು; ಉಡುಪಿ ಮೂಲದ ಮೂವರ ದಾರುಣ ಅಂತ್ಯ

01:43 PM May 07, 2022 | Team Udayavani |

ರಾಮನಗರ: ಕಾರು ಹಾಗೂ ಕೆಎಸ್ ಆರ್ ಟಿಸಿ ಬಸ್ ನಡುವಿನ ಭೀಕರ ಅಪಘಾತದಲ್ಲಿ 6 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

Advertisement

ಕಾರು ಚಾಲಕ ಉಮೇಶ್, ಪ್ರಯಾಣಿಕರಾದ ಅಕ್ಷತಾ ಸುರೇಂದ್ರ ಈಕೆಯ 6 ತಿಂಗಳ ಮಗು ಸುಮಂತ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತಳ ಪತಿ ಸುರೇಂದ್ರ  ಮತ್ತು ಇನ್ನೊಬ್ಬ ಪ್ರಯಾಣಿಕರಾದ ನವನೀತ ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರು ಉಡುಪಿ ಜಿಲ್ಲೆಯ ಬ್ರಹ್ಮಾವರದವರು ಎಂದು ತಿಳಿದು ಬಂದಿದೆ.

ಹಲಗೂರು ಕಡೆಯಿಂದ ಸಾತನೂರು ಕಡೆಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ  ಕಾರು ಢಿಕ್ಕಿ ಹೊಡೆದು ಮುಗುಚಿ ಬಿದ್ದಿದೆ. ಉಡುಪಿ ಜಿಲ್ಲೆಯಿಂದ ಕನಕಪುರಕ್ಕೆ ಕಾರು ಹೊರಟಿದ್ದು, ಕಾರಿನ ಚಾಲಕ ನಿದ್ದೆಯ ಮಂಪರಿನಲ್ಲಿ ವಾಹನವನ್ನು ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಸಾತನೂರು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next