Advertisement

ಕಂಟೈನರ್ ಗೆ ಕಾರು ಢಿಕ್ಕಿ: ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಯುವಕರು ಸಾವು

11:25 AM Feb 13, 2021 | keerthan |

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ಭೀಕರ ಅಪಘಾತ ನಡೆದಿದ್ದು, ಕಾರೊಂದು ನಿಂತಿದ್ದ ಕಂಟೈನರ್ ಗೆ ಢಿಕ್ಕಿಯಾದ ಕಾರಣ ಕಾರಿನಲ್ಲಿದ್ದ ನಾಲ್ವರು ಯುವಕರು ಸಾವನ್ನಪ್ಪಿದ ಘಟನೆ ಶನಿವಾರ ಮುಂಜಾನೆ ನಡೆದಿದೆ.

Advertisement

ಮೃತ ಯುವಕರೆಲ್ಲಾ ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ. ಇವರೆಲ್ಲಾ 25 ರಿಂದ 30 ರ ವಯೋಮಾನದವರಾಗಿದ್ದು, ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದರು.

ಇದನ್ನೂ ಓದಿ:ಕುಲ್ಗಾಮ್ ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಉಗ್ರ ನಂಟು? ಲಶ್ಕರ್ ಉಗ್ರ ಜಹೂರ್ ಅಹಮದ್ ಬಂಧನ

ಮೃತರನ್ನು ಅಭಿಷೇಕ್, ಮಂಜುನಾಥ್, ವಿಕ್ರಂ, ಚೇತನ್ ಎಂದು ಗುರುತಿಸಲಾಗಿದೆ. ಮೃತಪಟ್ಟ ಪೈಕಿ ಚೇತನ್ ಅಬಕಾರಿ ಇನ್ಸ್ ಪೆಕ್ಟರ್ ಹುದ್ದೆಗೆ ಇತ್ತೀಚೆಗಷ್ಟೇ ಆಯ್ಕೆಯಾಗಿದ್ದರು ಎಂದು ತಿಳಿದು ಬಂದಿದೆ.

ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಶವಗಳ ಮರಣೋತ್ತರ ಪರೀಕ್ಷೆಗಾಗಿ ಚನ್ನರಾಯಪಟ್ಟಣಕ್ಕೆ ತಂದಿದ್ದಾರೆ.

Advertisement

ಇದನ್ನೂ ಓದಿ:ವ್ಯಾಲಂಟೈನ್ಸ್‌ ಡೇಗೆ ಮಾಲ್‌ಗ‌ಳು, ಫ್ಯಾನ್ಸಿ ಮಳಿಗೆ, ಪಾರ್ಕ್‌ಗಳಲ್ಲಿ ಹೊಸ ಜೋಶ್‌

Advertisement

Udayavani is now on Telegram. Click here to join our channel and stay updated with the latest news.

Next