Advertisement

ಕಾರು ಢಿಕ್ಕಿಗೆ 7 ಅಡಿ ಮೇಲೆ ಹಾರಿ ಬಿದ್ದ ಯುವತಿ

03:20 PM Feb 05, 2023 | Team Udayavani |

ಬೆಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿಯೊಬ್ಬರುಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ರಸ್ತೆಯ ಆರ್‌.ವಿ.ಕಾಲೇಜು ಬಳಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

Advertisement

ಹುಬ್ಬಳ್ಳಿ ಮೂಲದ ಸ್ವಾತಿ(21) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫೆ.2ರಂದು ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾರು ಚಾಲಕ ಎಂಬಿಬಿಎಸ್‌ವಿದಾರ್ಥಿ ಕೃಷ್ಣ (20) ಎಂಬಾತನನ್ನು ಕೆಂಗೇರಿ ಸಂಚಾರ ಠಾಣೆ ಪೊಲೀಸರು ಬಂಧಿಸಲಾಗಿತ್ತು.ಕಾರು ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿ ಏಳೆಂಟುಅಡಿ ಮೇಲಕ್ಕೆ ಹಾರಿ ಕೆಳಗೆ ಬಿದ್ದಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಗಾಯಾಳು ಸ್ವಾತಿ ತಂದೆ ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ಆಗಿ ಕೆಲಸ ಮಾಡುತ್ತಿದ್ದಾರೆ. ವಿದ್ಯಾಭ್ಯಾಸ ಮಾಡಲೆಂದು ಬೆಂಗಳೂರಿಗೆ ಬಂದಿದ್ದು, ಪಟ್ಟಣಗೆರೆಯ ಪೇಯಿಂಗ್‌ ಗೆಸ್ಟ್‌ನಲ್ಲಿ ವಾಸವಾಗಿದ್ದರು. ಮೈಸೂರು ರಸ್ತೆಯ ಆರ್‌.ವಿ.ಎಂಜಿನಿಯರಿಂಗ್‌ ಕಾಲೇಜು ಮುಂಭಾಗ ಇರುವಬೆಂಗಳೂರು ಇನ್ಸ್‌ಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಸ್ಟಡೀಸ್‌(ಬಿಐಎಂಎಸ್‌) ಕಾಲೇಜಿನಲ್ಲಿಮೊದಲ ವರ್ಷದ ಎಂಬಿಎ ವ್ಯಾಸಂಗ ಮಾಡುತ್ತಿದ್ದರು. ಫೆ.2ರಂದು ಮಧ್ಯಾಹ್ನ 1.30ರ ಸುಮಾರಿಗೆ ಆರ್‌.ವಿ.ಎಂಜಿನಿಯರಿಂಗ್‌ ಕಾಲೇಜು ಕಡೆಯಿಂದ ಬಿಐಎಂಎಸ್‌ ಕಾಲೇಜಿಗೆ ತೆರಳಲು ರಸ್ತೆದಾಟುವಾಗ ಕೆಂಗೇರಿ ಕಡೆಯಿಂದ ಅತೀ ವೇಗವಾಗಿ ಬಂದ ಕಾರು ಸ್ವಾತಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಮುಂದೆ ಹೋಗಿತ್ತು.  ಪರಿಣಾಮ ಏಳೆಂಟು ಅಡಿಗಳಷ್ಟು ಮೇಲಕ್ಕೆ ಹಾರಿ ರಸ್ತೆಗೆ ಬಿದ್ದ ಸ್ವಾತಿ ಕಾಲು, ಕೈ, ಬೆನ್ನು ಸೇರಿ ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು. ಸದ್ಯ ಆಕೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕಜಾಲತಾಣದಲ್ಲಿ ವೈರಲ್‌ ಆಗಿದೆ. ಸ್ವಾತಿ ರಸ್ತೆ ದಾಟುವಾಗ ಕೆಂಗೇರಿ ಕಡೆಯಿಂದ ಬರುವ ಕೆಂಪುಬಣ್ಣದ ಕಾರು ಸ್ವಾತಿಗೆ ಡಿಕ್ಕಿ ಹೊಡೆದು ಮುಂದೆ ಸಾಗುತ್ತದೆ. ಡಿಕ್ಕಿಯ ರಭಸಕ್ಕೆ ಸ್ವಾತಿ ಏಳೆಂಟು ಅಡಿಮೇಲಕ್ಕೆ ಹಾರಿ ರಸ್ತೆಗೆ ಬೀಳುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾರು ನಿಲ್ಲಿಸದೇ ಕಾಲೇಜಿನೊಳಗೆ ನುಗ್ಗಿಸಿದ್ದ  :

Advertisement

ಅಪಘಾತ ಎಸೆಗಿದ ಕಾರು ಚಾಲಕ ಕೃಷ್ಣ ರಾಜರಾಜೇಶ್ವರಿ ಮೆಡಿಕಲ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್‌ ಓದುತ್ತಿದ್ದಾನೆ. ಘಟನೆ ಬಳಿಕ ಕಾರು ನಿಲ್ಲಿಸದೆ ಗಾಬರಿಯಲ್ಲಿ ಆರ್‌. ವಿ.ಎಂಜಿನಿಯರಿಂಗ್‌ ಕಾಲೇಜು ಆವರಣದೊಳಗೆ ಕಾರು ನುಗ್ಗಿಸಿದ್ದ. ಬಳಿಕ ಆತನನ್ನು ಬಂಧಿಸಿ ಕಾರನ್ನು ಜಪ್ತಿ ಮಾಡಲಾಗಿತ್ತು. ಇದೀಗ ಆರೋಪಿಯನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಅತಿ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆಕಂಡು ಬಂದಿದೆ. ವಿಚಾರಣೆ ವೇಳೆ ಆರೋಪಿ, ಘಟನೆ ವೇಳೆ ಜನ ಸೇರಿದ್ದರಿಂದ ಹೆದರಿ ಪರಾರಿಯಾಗಿದ್ದೆ ಎಂದಿದ್ದಾನೆ ಎಂದು ಸಂಚಾರ ಠಾಣೆ ಪೊಲೀಸರು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next